Connect with us

ಶಾಲಾ ಚಟುವಟಿಕೆ

ಕೊಂಬೆಟ್ಟು ಪ್ರೌಢಶಾಲೆಯಲ್ಲಿ ನೂತನ ವಿದ್ಯಾರ್ಥಿಗಳಿಗೆ ಸ್ವಾಗತ, ಶಾಲಾ ಪ್ರಾರಂಭೋತ್ಸವ : ಸಂಸ್ಥೆಯ ಹಿರಿತನದ ಅನುಭೂತಿ ಅನನ್ಯ : ಜೋಕಿಂ ಡಿ ‘ಸೋಜಾ

Published

on

ವಿದ್ಯಾರ್ಥಿಗಳ ಶಿಕ್ಷಣದ ಹಾದಿಯ ಯಶಸ್ಸಿಗೆ ಇಲಾಖೆ ಮತ್ತು ಶಿಕ್ಷಕರ ಜೊತೆಯಲ್ಲಿ ಪೋಷಕರ ಸಹಕಾರವೂ ಇದ್ದಾಗ ಅದು ಯಶಸ್ಸಿನ ಹಾದಿಯತ್ತ ನಡೆಯುತ್ತದೆ. ಪೋಷಕರ ಶೈಕ್ಷಣಿಕ ಜವಾಬ್ದಾರಿಯು ಬಹು ಮುಖ್ಯವಾಗಿದ್ದು ಮಕ್ಕಳನ್ನು ಶಿಕ್ಷಣದ ಹಾದಿಯಲ್ಲಿ ಅವರ ತ್ಯಾಗವು ಬಹಳಷ್ಟು ಪ್ರಮುಖವಾದ ಪಾತ್ರವನ್ನು ವಹಿಸುತ್ತದೆ. ಸಂಸ್ಥೆಯೊಂದರ ಹಿರಿತನವೂ ಕೂಡ ಆ ಶಾಲೆಯ ವಿಶಿಷ್ಟತೆಯನ್ನು ಧ್ವನಿಸುತ್ತದೆ. ಕೊಂಬೆಟ್ಟು ವಿದ್ಯಾ ಸಂಸ್ಥೆಯ ಹಿರಿತನವು ಇಲ್ಲಿ ಕಲಿಯುತ್ತಿರುವ ವಿದ್ಯಾರ್ಥಿಗಳಿಗೆ ಒಂದು ವಿಶಿಷ್ಟ ಅನುಭೂತಿಯನ್ನು ನೀಡುತ್ತದೆ ” ಎಂದು ಕೊಂಬೆಟ್ಟು ಪ್ರೌಢಶಾಲೆಯ ಶಾಲಾಭಿವೃದ್ಧಿ ಸಮಿತಿಯ ಕಾರ್ಯಾಧ್ಯಕ್ಷರಾದ ಜೋಕಿಂ ಡಿಸೋಜಾರವರು ನುಡಿದರು.

 

ಅವರು ದಿನಾಂಕ 02-0 6- 2025 ರಂದು ಸಂಸ್ಥೆಯಲ್ಲಿ ನಡೆದ ಶೈಕ್ಷಣಿಕ ವರ್ಷ 2025- 26ನೇ ಸಾಲಿನ ನೂತನ ವಿದ್ಯಾರ್ಥಿಗಳ ಸ್ವಾಗತ ಹಾಗೂ ಪ್ರಾರಂಭೋತ್ಸವ ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿಕೊಂಡು ಮಾತನಾಡುತ್ತಿದ್ದರು.

ಈ ಶೈಕ್ಷಣಿಕ ವರ್ಷದಲ್ಲಿ ಶಾಲೆಗೆ ನೂತನವಾಗಿ ದಾಖಲಾದ ಸುಮಾರು 181 ವಿದ್ಯಾರ್ಥಿಗಳನ್ನು ಆರತಿ ಬೆಳಗಿ ಬ್ಯಾಂಡ್ ವಾದನ ಹಾಗೂ ಪನ್ನೀರ ಹೂ ಸಿಂಚನದೊಂದಿಗೆ ವಿದ್ಯಾಸಂಸ್ಥೆಗೆ ಸ್ವಾಗತಿಸಲಾಯಿತು.

 

 

 

ನಂತರ ನಡೆದ ಸಭಾ ಕಾರ್ಯಕ್ರಮದಲ್ಲಿ ದೀಪಬೆಳಗಿಸಿ ಶೈಕ್ಷಣಿಕ ವರ್ಷದ ಕಾರ್ಯಚಟುವಟಿಕೆಗಳಿಗೆ ಚಾಲನೆ ನೀಡಲಾಯಿತು. ವಿದ್ಯಾರ್ಥಿಗಳಿಗೆ ಸಾಂಕೇತಿಕವಾಗಿ ಪಠ್ಯಪುಸ್ತಕಗಳನ್ನು ವಿತರಿಸಲಾಯಿತು. ವೇದಿಕೆಯಲ್ಲಿ ಶಾಲಾಭಿವೃದ್ಧಿ ಸಮಿತಿಯ ಸದಸ್ಯರುಗಳು ಉಪಸ್ಥಿತರಿದ್ದರು.
ಶಾಲಾ ಉಪಪ್ರಾಂಶುಪಾಲರಾದ ವಸಂತ ಮೂಲ್ಯರವರು ಈ ಶೈಕ್ಷಣಿಕ ವರ್ಷದಲ್ಲಿ ವಿದ್ಯಾರ್ಥಿಗಳು ಅನುಸರಿಸಬೇಕಾದ ನಿಯಮಗಳು , ಶಾಲೆಯ ಧ್ಯೇಯೋದ್ದೇಶಗಳನ್ನು ವಿವರಿಸಿದರು.
ಶಾಲಾಭಿವೃದ್ಧಿ ಸಮಿತಿಯ ಸದಸ್ಯರಾದ ಸುರೇಶ್ ರೈ ಪಡ್ಡಂಬೈಲು ಹಾಗೂ ಬಾಲಕೃಷ್ಣ ಗೌಡ ತಮ್ಮ ಅನಿಸಿಕೆಗಳನ್ನು ವ್ಯಕ್ತಪಡಿಸಿದರು.

 

 

ಇದೇ ಸಂದರ್ಭದಲ್ಲಿ ಶಾಲಾಭಿವೃದ್ಧಿ ಸಮಿತಿಯಲ್ಲಿ ತೆರವಾಗಿದ್ದ ನಾಲ್ಕು ಸ್ಥಾನಗಳಿಗೆ ಹೊಸದಾಗಿ ಸದಸ್ಯರುಗಳನ್ನು ಆಯ್ಕೆ ಮಾಡಲಾಯಿತು. ಶಾಲಾ ತಾಯಂದಿರ ಸಮಿತಿಗೆ 12 ಜನ ಸದಸ್ಯರುಗಳನ್ನು ಆಯ್ಕೆ ಮಾಡಲಾಯಿತು.

ಶಿಕ್ಷಕಿ ಗೀತಾಂಜಲಿ ಇವರ ಪ್ರಾರ್ಥನೆ ಯೊಂದಿಗೆ ಪ್ರಾರಂಭವಾದ ಕಾರ್ಯಕ್ರಮದಲ್ಲಿ ಹಿರಿಯ ಶಿಕ್ಷಕಿ ಮಮತಾ ರೈ ಸ್ವಾಗತಿಸಿದರು. ಶಿಕ್ಷಕ ಗ್ರೆಗೊರಿ ರೋನಿ ವಂದಿಸಿದರು. ಪ್ರಶಾಂತ್ ಅನಂತಾಡಿ ಕಾರ್ಯಕ್ರಮ ನಿರ್ವಹಿಸಿದರು. ಶಿಕ್ಷಕ ವೃಂದದವರು ಸಹಕರಿಸಿದರು. ಇದೇ ಸಂದರ್ಭದಲ್ಲಿ ವಿದ್ಯಾರ್ಥಿಗಳಿಗೆ ಸಿಹಿತಿಂಡಿಯನ್ನು ವಿತರಿಸಲಾಯಿತು.

 

 

Continue Reading
Click to comment

Leave a Reply

Your email address will not be published. Required fields are marked *

Advertisement