Published
2 days agoon
By
Akkare News18 ವರ್ಷಗಳ ಬಳಿಕ ಆರ್ಸಿಬಿ ತಂಡವು ಐಪಿಎಲ್ ಕಪ್ ಗೆದ್ದ ಸಂಭ್ರಮದಲ್ಲಿ ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಆಯೋಜಿಸಿದ್ದ ಕಾರ್ಯಕ್ರಮಕ್ಕೆ ಅಪಾರ ಸಂಖ್ಯೆಯ ಅಭಿಮಾನಿಗಳು ಆಗಮಿಸಿದ್ದರು. ಸ್ಟೇಡಿಯಂ ತುಂಬಿದ್ದರಿಂದ ಗೇಟ್ ಮುಚ್ಚಲಾಗಿತ್ತು, ಅಭಿಮಾನಿಗಳ ನೂಕುನುಗ್ಗಲಿನಲ್ಲಿ ಗೇಟ್ ಕುಸಿದು 10ಕ್ಕೂ ಹೆಚ್ಚು ಜನರಿಗೆ ಗಾಯಗಳಾಗಿವೆ. ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ, ಮೂವರ ಸ್ಥಿತಿ ಗಂಭೀರವಾಗಿದೆ.
ಬೆಂಗಳೂರು: 18 ವರ್ಷಗಳ ಬಳಿಕ ಐಪಿಲ್ ಕಪ್ ಗೆದ್ದ ಆರ್ಸಿಬಿ ತಂಡವು ಬೆಂಗಳೂರಿಗೆ ಆಗಮಿಸಿದ್ದು, ಚಿನ್ನಸ್ವಾಮಿ ಸ್ಟೇಡಿಯಂ ಬಳಿ ಕಾರ್ಯಕ್ರಮಕ್ಕೆ ಹಮ್ಮಿಕೊಳ್ಳಲಾಗಿದೆ. ಈ ಕಾರ್ಯಕ್ರಮಕ್ಕೆ ಆಗಮಿಸಲು ಅಪಾರ ಸಂಖ್ಯೆಯ ಅಭಿಮಾನಿಗಳು ಸ್ಟೇಡಿಯಂ ಬಳಿ ಆಗಮಿಸಿದ ಹಿನ್ನೆಲೆ ಕಾಲ್ತುಳಿತ ಉಂಟಾಗಿದೆ. ಘಟನೆಯಲ್ಲಿ 8 ಮಂದಿ ಮೃತಪಟ್ಟಿದ್ದಾರೆ ಎನ್ನಲಾಗಿದೆ.
ಬುಧವಾರ ಸಂಜೆ ಏಕಾಏಕಿ ಸಾವಿರಾರು ಸಂಖ್ಯೆಯಲ್ಲಿ ಆರ್ಸಿಬಿ ಅಭಿಮಾನಿಗಳು ಚಿನ್ನಸ್ವಾಮಿ ಸ್ಟೇಡಿಯಂ ಬಳಿ ನುಗ್ಗಿದರು. ಸ್ಟೇಡಿಯಂ ಭರ್ತಿಯಾದ ಹಿನ್ನೆಲೆ ಗೇಟ್ ಬಂದ ಮಾಡಲಾಗಿತ್ತು. ಈ ವೇಳೆ ಅಭಿಮಾನಿಗಳ ನೂಕುನುಗ್ಗಲು ಉಂಟಾಗಿದೆ. ಅಪಾರ ಸಂಖ್ಯೆಯಲ್ಲಿ ಅಭಿಮಾನಿಗಳು ಒಳಗೆ ನುಗ್ಗಲು ಯತ್ನಿಸಿದಾಗ ಗೇಟ್ ಒಂದು ಕುಸಿದು ಬಿದ್ದಿದೆ. ಈ ಘಟನೆಯಲ್ಲಿ 10 ಕ್ಕೂ ಹೆಚ್ಚು ಮಂದಿಗೆ ಗಾಯಗಳಾಗಿವೆ. ಕೂಡಲೇ ಪೊಲೀಸರು ಗಾಯಾಳುಗಳನ್ನು ಬೌರಿಂಗ್ ಆಸ್ಪತ್ರೆಗೆ ರವಾನೆ ಮಾಡಿದರು.
ಕಬ್ಬಿಣದ ಬೃಹದಾಕಾರದ ಗೇಟ್ ಕುಸಿದ ಕೂಡಲೇ ಅದನ್ನು ಹಿಡಿದು ನಿಂತಿದ್ದ ಗೇಟ್ ಕೆಳಗೆ ಸಿಲುಕಿಕೊಂಡರು. ಆ ಪೈಕಿ 10 ಮಂದಿಗೆ ಹೆಚ್ಚಿನ ಗಾಯಗಳಾದವು. 4 ಮಂದಿಗೆ ಗಂಭೀರ ಗಾಯಗಳಾಗಿ ಮೃತಪಟ್ಟಿದ್ದಾರೆ. ಪೊಲೀಸರು ಆಂಬ್ಯುಲೆನ್ಸ್ ಸಹಾಯದಿಂದ ಸಮೀದಪ ಶಿವಾಜಿನಗರದ ಬೌರಿಂಗ್ ಆಸ್ಪತ್ರೆಗೆ ಗಾಯಾಳುಗಳನ್ನು ರವಾನೆ ಮಾಡಿದರು.
8 ಮಂದಿ ಮೃತರ ಪೈಕಿ ಏಳು ಪುರುಷರು ಹಾಗೂ ಒಬ್ಬ ಮಹಿಳೆ ಎಂದು ಗುರುತಿಸಲಾಗಿದೆ.
ನಾವೆಲ್ಲರೂ ಆರ್ಸಿಬಿ ವಿಜಯದ ಸಂಭ್ರಮದಲ್ಲಿ ಇದ್ದೇವೆ. ಬೆಂಗಳೂರಿನಲ್ಲಿ ನಡೆಯುತ್ತಿರುವ ಸಂಭ್ರಮಾಚರಣೆಯಲ್ಲಿ ಈಗಾಗಲೇ ಕಾಲ್ತುಳಿತ ಹಾಗೂ ನುಕೂನುಗ್ಗಲಿಂದ 20ಕ್ಕೂ ಹೆಚ್ಚು ಅಭಿಮಾನಿಗಳು ಅಸ್ವಸ್ಥರಾಗಿದ್ದಾರೆ, ಆದರಿಂದ ಸರ್ಕಾರ ಸೂಕ್ತ ಸುರಕ್ಷತಾ ಕ್ರಮಗಳನ್ನು ಕೈಗೊಳ್ಳಬೇಕು. ಇದಕ್ಕೆ ಕ್ರೀಡಾಭಿಮಾನಿಗಳು ಕೂಡ ಅತ್ಯಂತ ಸಂಯಮದಿಂದ ಸಹಕರಿಸಬೇಕಾಗಿ ಮನವಿ ಮಾಡುತ್ತೇನೆ.