Connect with us

ಇತರ

ಸುಹಾಸ್ ಶೆಟ್ಟಿ ಪ್ರಕರಣದೊಂದಿಗೆ ಉಳಿದ ಮೂರು ಕೊಲೆ ಪ್ರಕರಣಗಳನ್ನು ಎನ್ ಐ ಎ (NIA) ಗೆ ಯಾಕೆ ನೀಡಿಲ್ಲ?-ಹರೀಶ್ ಕುಮಾರ್ ಪ್ರಶ್ನೆ

Published

on

ಮಂಗಳೂರು: ದಕ್ಷಿಣ ಕನ್ನಡದಲ್ಲಿ ನಡೆದ ನಾಲ್ಕು ಕೊಲೆ ಪ್ರಕರಣಗಳಲ್ಲಿ, ಸುಹಾಸ್ ಶೆಟ್ಟಿ ಕೊಲೆ ಪ್ರಕರಣವನ್ನು ಮಾತ್ರ ಎನ್ ಐ ಎ(NIA) ನೀಡಲಾಗಿದ್ದು, ಉಳಿದ ಮೂರು ಪ್ರಕರಣಗಳನ್ನು ಯಾಕೆ ಎನ್ ಐ ಎ ಗೆ ನೀಡಿಲ್ಲ ಎಂದು ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹರೀಶ್ ಕುಮಾರ್ ಪ್ರಶ್ನಿಸಿದ್ದಾರೆ.

ಇಲ್ಲಿ ಕೇಂದ್ರ ಸರ್ಕಾರ ಕೊಲೆ ಪ್ರಕರಣದಲ್ಲಿ ತಾರತಮ್ಮ ನೀತಿಯನ್ನು ಅನುಸರಿಸುತ್ತಿದೆ. ರಾಜಕೀಯ ದೃಷ್ಟಿಯಿಂದ ಕೊಲೆ ಪ್ರಕರಣವನ್ನು ನೋಡುತಿದೆ ಹೊರತು, ನಿಜವಾದ ನ್ಯಾಯ ಒದಗಿಸಲು ಕೇಂದ್ರ ಸರಕಾರ ಮುಂದಾಗುತ್ತಿಲ್ಲ ಎಂದು ಹರೀಶ್ ಕುಮಾರ್ ಅಪಾದಿಸಿದ್ದಾರೆ.

ಕೊಲೆಯಾದವರಿಗೆ ನಿಜವಾದ ನ್ಯಾಯ ದೊರಕಿಸಬೇಕಾದರೆ ಕೇಂದ್ರ ಸರಕಾರ ಈ ತಾರತಮ್ಯದ ನೀತಿಯನ್ನು ಬಿಟ್ಟು ಪ್ರಾಮಾಣಿಕವಾದ ತನಿಖೆಗೆ ಮುಂದಾಗಲಿ ಎಂದು ಅವರು ಆಗ್ರಹಿಸಿದ್ದಾರೆ.

 

 

 

ಕೇವಲ ಒಂದು ಪ್ರಕರಣವನ್ನು ನೀಡುವ ಮೂಲಕ ಕೇಂದ್ರ ಸರಕಾರ ಎಲ್ಲೋ ಜನರಲ್ಲಿ ಸಂಶಯ ಹಾಗೂ ತಪ್ಪು ಅಭಿಪ್ರಾಯವನ್ನು ಮೂಡಿಸುವ ಮೂಲಕ ಸಂವಿಧಾನ ವಿರೋಧಿ ನಡೆಯನ್ನು ಅನುಸರಿಸುತ್ತಿದೆ ಎಂದು ಅವರ ಅಭಿಪ್ರಾಯ ಪಟ್ಟಿದ್ದಾರೆ.

 

 

 


 

 

Continue Reading
Click to comment

Leave a Reply

Your email address will not be published. Required fields are marked *

Advertisement