Connect with us

ಸ್ಥಳೀಯ

ಹೆಚ್ಚು ಮಕ್ಕಳನ್ನು ಹೆತ್ತರೆ ಪ್ರೋತ್ಸಾಹ ಧನ: ಚಂದ್ರಬಾಬು ನಾಯ್ಡು ಘೋಷಣೆ

Published

on

ದಕ್ಷಿಣ ಭಾರತದ ರಾಜ್ಯಗಳ ಜನಸಂಖ್ಯೆ ಇಳಿಕೆ ಬಗ್ಗೆ ಹಿಂದೊಮ್ಮೆ ಕಳವಳ ವ್ಯಕ್ತಪಡಿಸಿದ್ದ ಆಂಧ್ರಪ್ರದೇಶದ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು, ಇದೀಗ ಹೆಚ್ಚು ಮಕ್ಕಳನ್ನು ಹೊಂದುವಂತೆ ಪರಿವಾರಗಳನ್ನು ಪ್ರೋತ್ಸಾಹಿಸಲು ಆರ್ಥಿಕ ಬೆಂಬಲ ನೀಡಲಾಗುವುದು ಎಂದು ಘೋಷಿಸಿದ್ದಾರೆ.

ಜನಸಂಖ್ಯೆ ಇಳಿಮುಖವಾಗುತ್ತಿರುವ ರಾಜ್ಯಗಳಲ್ಲಿ ಫಲವತ್ತತೆ ಹೆಚ್ಚಬೇಕು. ಆದ್ದರಿಂದ ಇನ್ನು ಪ್ರತಿ ಪರಿವಾರವನ್ನು ಒಂದು ಘಟಕವೆಂದು ಪರಿಗಣಿಸಬೇಕು. ಇದೊಂದು ಹೂಡಿಕೆಯಾಗಿದೆ. ಕುಟುಂಬ ಹೆಚ್ಚಾದಂತೆ ಪ್ರೋತ್ಸಾಹ ಧನವೂ ಹೆಚ್ಚುವುದು ಎನ್ನುವ ಮೂಲಕ ಪರಿವಾರ ವಿಸ್ತರಣೆಗೆ ಪರೋಕ್ಷವಾಗಿ ಕರೆ ನೀಡಿದರು. ದಕ್ಷಿಣದ ರಾಜ್ಯಗಳಲ್ಲಿ ಜನಸಂಖ್ಯೆ ಕೊರತೆ ಮುಂದಿನ ದಿನಗಳಲ್ಲಿ ಭಾರೀ ಅಪಾಯ ತರಲಿದೆ ಎಂದು ಸಿಎಂ ನಾಯ್ಡು ಈಗಾಗಲೇ ಕಳವಳ ವ್ಯಕ್ತಪಡಿಸಿದ್ದಾರೆ. ಏಕೆಂದರೆ ಇದರಿಂದ ದಕ್ಷಿಣ ಭಾರತದಲ್ಲಿ ಲೋಕಸಭಾ ಸ್ಥಾನಗಳ ಕೊರತೆ ಉಂಟಾಗಲಿದೆ. ಇದರಿಂದ ಪ್ರಾದೇಶಿಕ ಪಕ್ಷಗಳಿಗೆ ತಮ್ಮ ಸ್ಥಾನ ಕಳೆದುಕೊಳ್ಳುವ ಸಾಧ್ಯತೆ ಹೆಚ್ಚಿದೆ. ಉತ್ತರ ಭಾರತದಲ್ಲಿ ಜನಸಂಖ್ಯೆ ಹೆಚ್ಚಾಗುತ್ತಿರುವುದರಿಂದ ಅಲ್ಲಿ ಲೋಕಸಭಾ ಸ್ಥಾನಗಳು ಹೆಚ್ಚಳವಾಗಲಿದೆ.

 

 

ಈ ಕಾರಣಕ್ಕಾಗಿ 2 ಕ್ಕಿಂತ ಹೆಚ್ಚು ಮಕ್ಕಳನ್ನು ಹೊಂದಿದ್ದವರು ಸ್ಥಳೀಯ ಸಂಸ್ಥೆ ಚುನಾವಣೆ ಸ್ಪರ್ಧೆಗೆ ಅನರ್ಹ ಎಂಬ ನಿಯಮ ರದ್ದು ಮಾಡಲಾಗಿದೆ. ಹೆಚ್ಚು ಮಕ್ಕಳನ್ನು ಹೊಂದುವವರಿಗೆ ಪ್ರೋತ್ಸಾಹ ಧ ನ ನೀಡುವುದಾಗಿ ಘೋಷಿಸಿರುವುದರಿಂದ ಇನ್ನು ಮುಂದೆ ಈ ಅನರ್ಹತೆಯ ಪ್ರಶ್ನೆ ಬರುವುದಿಲ್ಲ. ಇದೀಗ ಹೆಚ್ಚು ಹೆಚ್ಚು ಮಕ್ಕಳನ್ನು ಹೊಂದಿದ ಕುಟುಂಬಗಳಿಗೆ ಆರ್ಥಿಕ ನೆರವು ಘೋಷಣೆ ಮೂಲಕ ಜನಸಂಖ್ಯೆ ಹೆಚ್ಚಳಕ್ಕೆ ಕ್ರಮ ಕೈಗೊಳ್ಳಲಾಗಿದೆ.

 

ಶಾಲೆಗೆ ಹೋಗುವ ಎಲ್ಲಾ ಮಕ್ಕಳಿಗೆ ವಾರ್ಷಿಕ 15000 ರೂ ಆರ್ಥಿಕ ನೆರವನ್ನು ನೀಡಲಾಗುವುದು. ಅದು ನೇರವಾಗಿ ತಾಯಂದಿರಿಗೆ ಸೇರಲಿದೆ. ಇದನ್ನು ಹೊರತು ಪಡಿಸಿ, ಅಧಿಕ ಮಕ್ಕಳನ್ನು ಹೊಂದುವ ದಂಪತಿಗಳಿಗೆ ಆರ್ಥಿಕ ನೆರವು ನೀಡಲು ಚಿಂತನೆ ನಡೆಸುತ್ತಿದ್ದೇವೆ” ಎಂದು ನಾಯ್ಡು ತಿಳಿಸಿದ್ದಾರೆ. ಇತ್ತೀಚೆಗಷ್ಟೇ ಮಹಿಳೆಯರ ಮಾತೃತ್ವದ ರಜೆ ಮೇಲಿನ 2 ಬಾರಿಯ ಮಿತಿಯನ್ನು ತೆಗೆದುಹಾಕಲಾಗಿತ್ತು. ಅದಕ್ಕೂ ಮೊದಲು 2 ಕ್ಕಿಂತ ಹೆಚ್ಚು ಮಕ್ಕಳಿರುವವರು ಸ್ಥಳೀಯ ಚುನಾವಣೆಗಳಲ್ಲಿ ಸ್ಪರ್ಧಿಸದಂತೆ ನಿರ್ಬಂಧ ಹೇರಲಾಗಿತ್ತು.

 

 

 

 

 

 


 

 

Continue Reading
Click to comment

Leave a Reply

Your email address will not be published. Required fields are marked *

Advertisement