Published
9 months agoon
By
Akkare News
ಈಗಾಗಲೇ ಕರ್ನಾಟಕದ ಕೆಲವೆಡೆ ಮುಂಗಾರು ಅಬ್ಬರ ಶುರುವಾಗಿದೆ, ಜೂನ್ 13ರಿಂದ ಮಳೆಯ ಪ್ರಮಾಣ ಮತ್ತಷ್ಟು ಹೆಚ್ಚಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
9 ಜಿಲ್ಲೆಗಳಿಗೆ ರೆಡ್ ಅಲರ್ಟ್ ಘೋಷಿಸಲಾಗಿದೆ. ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಬೆಳಗಾವಿ, ಧಾರವಾಡ, ಗದಗ, ಚಿಕ್ಕಮಗಳೂರು, ಕೊಡಗು, ಶಿವಮೊಗ್ಗ ಜಿಲ್ಲೆಗಳಲ್ಲಿ ಅತಿ ಹೆಚ್ಚು ಮಳೆಯಾಗಲಿದೆ.
ವಿಜಯನಗರ, ತುಮಕೂರು, ರಾಮನಗರ, ಮೈಸೂರು, ಮಂಡ್ಯ, ಹಾಸನ, ದಾವಣಗೆರೆ, ಚಿತ್ರದುರ್ಗ, ಚಿಕ್ಕಬಳ್ಳಾಪುರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ ಬಳ್ಳಾರಿ, ಯಾದಗಿರಿ, ರಾಯಚೂರು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಒಟ್ಟಿನಲ್ಲಿ ಇಂದಿನಿಂದಲೇ ರಾಜ್ಯಾದ್ಯಂತ ಮಳೆಯ ಪ್ರಮಾಣ ಹೆಚ್ಚಾಗಲಿದೆ. ಬೆಂಗಳೂರು ಸೇರಿ ಹಲವೆಡೆ ಬುಧವಾರ ಮಳೆಯಾಗಿತ್ತು.
ಮಂಗಳೂರು, ಕೋಟಾ, ಮುಲ್ಕಿ, ಕುಂದಾಪುರ, ಚಿಟಗುಪ್ಪ, ಭಾಲ್ಕಿ, ದಾವಣಗೆರೆ, ಬೇಗೂರು, ಹರಪನಹಳ್ಳಿ, ಬಾಳೆಹೊನ್ನೂರು, ದಾವಣಗೆರೆ, ಗೌರಿಬಿದನೂರು, ಕಕ್ಕೇರಿ, ಮೂಡುಬಿದಿರೆ, ಮಾಣಿ, ಹುಮ್ನಾಬಾದ್, ಲಕ್ಷ್ಮೇಶ್ವರ, ಲಿಂಗಸುಗೂರು, ಯಡ್ರಾಮಿ, ಕಮಲಾಪುರ, ಶಾಹಪುರ,ಬೀದರ್, ಚನ್ನಗಿರಿ, ಚಾಮರಾಜನಗರ, ಕೃಷ್ಣರಾಜಪೇಟೆಯಲ್ಲಿ ಮಳೆಯಾಗಿದೆ.