Published
12 hours agoon
By
Akkare Newsರಾಷ್ಟ್ರೀಯ ಹೆದ್ದಾರಿ 169 ಎ ತೀರ್ಥಹಳ್ಳಿ-ಮಲ್ಪೆ ರಸ್ತೆಯ ಆಗುಂಬೆ ಘಾಟಿಯಲ್ಲಿ ಭಾರೀ ಮಳೆ ಆರಂಭವಾಗಿರುವುದರಿಂದ ಮುನ್ನೆಚ್ಚರಿಕೆ ಕ್ರಮವಾಗಿ ಜೂ.15ರಿಂದ ಸೆಪ್ಟೆಂಬರ್ 30ರವರೆಗೆ ಭಾರಿ ವಾಹನಗಳ ಸಂಚಾರ ನಿಷೇಧಿಸಿ ಜಿಲ್ಲಾಧಿಕಾರಿ ಆದೇಶಿಸಿದ್ದಾರೆ. ಭಾರೀ ವಾಹನಗಳು ಪರ್ಯಾಯ ಮಾರ್ಗದಲ್ಲಿ ಸಂಚರಿಸುವಂತೆ ಆದೇಶಿಸಲಾಗಿದೆ.
ಕೇಂದ್ರ ಮೋಟಾರು ವಾಹನ ಕಾಯ್ದೆ 1988 ರ ಕಲಂ 115 ಹಾಗೂ ಕರ್ನಾಟಕ ಮೋಟಾರು ವಾಹನಗಳ ನಿಯಮಾವಳಿಗಳು 1989 ರ ಕಲಂ 221 (ಎ) (2) ಮತ್ತು (5) ರನ್ವಯ, ರಾಷ್ಟ್ರೀಯ ಹೆದ್ದಾರಿ 169 ಎ ಆಗುಂಬೆ ಘಾಟಿಯ ಮೂಲಕ ಜೂನ್ 15 ರಿಂದ ಸೆಪ್ಟಂಬರ್ 30 ರ ವರೆಗೆ ಲಘು ವಾಹನ ಸಂಚಾರಕ್ಕೆ ಮಾತ್ರ ಅನುವು ಮಾಡಿ, ಭಾರಿ ವಾಹನ ಸಂಚಾರವನ್ನು ನಿರ್ಬಂಧಿಸಿ ಜಿಲ್ಲಾ ದಂಡಾಧಿಕಾರಿಯೂ ಆಗಿರುವ ಜಿಲ್ಲಾಧಿಕಾರಿ ಡಾ. ಕೆ ವಿದ್ಯಾಕುಮಾರಿ ಆದೇಶಿಸಿದ್ದಾರೆ.
ಉಡುಪಿಯಿಂದ ತೀರ್ಥಹಳ್ಳಿಗೆ ಸಂಚರಿಸುವ ಭಾರಿ ವಾಹನಗಳು ಬದಲಿ ಮಾರ್ಗವಾಗಿ ಉಡುಪಿ-ಕುಂದಾಪುರ-ಸಿದ್ಧಾಪುರ-ಮಾಸ್ತಿಕಟ್ಟೆ- ತೀರ್ಥಹಳ್ಳಿ ಮಾರ್ಗವಾಗಿ ಸಂಚರಿಸುವಂತೆ ಜಿಲ್ಲಾಧಿಕಾರಿ ಡಾ. ಕೆ ವಿದ್ಯಾಕುಮಾರಿ ಆದೇಶದಲ್ಲಿ ತಿಳಿಸಲಾಗಿದೆ.