Connect with us

ಇತರ

ಕಾಂತಾರ: ಚಾಪ್ಟರ್ 1’ ಸಿನಿಮಾ ಸೆಟ್​ನಲ್ಲಿ ಸರಣಿ ಅವಘಡ… ರಿಷಬ್ ಶೆಟ್ಟಿ ಮತ್ತು30 ಕ್ಕೂ ಹೆಚ್ಚು ಕಲಾವಿದರು , ಬೋಟು ಮುಳುಗಡೆ… ದೈವ ಮುನಿಯಿತೇ ಎಂಬ ಪ್ರಶ್ನೆ…??

Published

on

‘ಕಾಂತಾರ ಚಾಪ್ಟರ್ 1’ ಸಿನಿಮಾದ ಚಿತ್ರೀಕರಣ ನಡೆಸಲಾಗುತ್ತಿದ್ದ ಬೋಟ್ ಒಂದು ಮುಗಿಚಿದೆಯಂತೆ. ಬೋಟ್​​ನಲ್ಲಿ ರಿಷಬ್ ಶೆಟ್ಟಿ ಸೇರಿದಂತೆ ಸುಮಾರು 30ಕ್ಕೂ ಹೆಚ್ಚು ಮಂದಿ ಕಲಾವಿದರು, ಹಾಗೂ ತಂತ್ರಜ್ಞರು ಇದ್ದರೆಂದು ವರದಿ ಆಗಿದೆ. ಚಿತ್ರೀಕರಣ ಚಾಲ್ತಿಯಲ್ಲಿರುವಾಗಲೇ ಬೋಟು ಮುಗಿಚಿದೆ ಆದರೆ ಯಾವುದೇ ಜೀವ ಹಾನಿ ಆಗಿಲ್ಲ. ಕಲಾವಿದರು, ತಂತ್ರಜ್ಞರೆಲ್ಲರೂ ಈಜಿಕೊಂಡು ದಡಕ್ಕೆ ಬಂದಿದ್ದಾರೆ ಎನ್ನಲಾಗುತ್ತಿದೆ.

ಮಾಸ್ತಿಕಟ್ಟೆಯ ಮಾಣಿ ಜಲಾಶಯದಲ್ಲಿ ಸಿನಿಮಾದ ಚಿತ್ರೀಕರಣ ಮಾಡಲಾಗುತ್ತಿತ್ತು. ಕತ್ತಲಿನಲ್ಲೇ ಸಿನಿಮಾದ ಶೂಟಿಂಗ್ ಮಾಡಲಾಗುತ್ತಿತ್ತು. ದೋಣಿ ಮುಗಿಚಿದರೂ ಕಲಾವಿದರು ಮತ್ತು ತಂತ್ರಜ್ಞರು ಸೇಫ್ ಆಗಿದ್ದಾರಾದರೂ ಕ್ಯಾಮೆರಾ ಇನ್ನಿತರೆ ಸೆಟ್ ಪ್ರಾಪರ್ಟಿಗಳು ನೀರು ಪಾಲಾಗಿವೆ ಎನ್ನಲಾಗುತ್ತಿದೆ. ಆದರೆ ಈ ಘಟನೆ, ಈಗಾಗಲೇ ಹೆದರಿರುವ ‘ಕಾಂತಾರ: ಚಾಪ್ಟರ್ 1’ ಚಿತ್ರತಂಡವನ್ನು ಮತ್ತಷ್ಟು ಹೆದರಿಸಿದೆ.

 

 

 

‘ಕಾಂತಾರ: ಚಾಪ್ಟರ್ 1’ ಸಿನಿಮಾ ಸೆಟ್​ನಲ್ಲಿ ಸರಣಿ ಅವಘಡಗಳು ನಡೆಯುತ್ತಲೇ ಇವೆ. ಮೊದಲಿಗೆ ಸಿನಿಮಾದಲ್ಲಿ ಕೆಲಸ ಮಾಡುತ್ತಿದ್ದ ಕೇರಳ ಮೂಲದ ಜೂನಿಯರ್ ಆರ್ಟಿಸ್ಟ್ ಒಬ್ಬರು ಈಜಲು ಹೋಗಿ ಮುಳುಗಿ ಪ್ರಾಣಬಿಟ್ಟರು. ಅದಾದ ಮೇಲೆ ಸಿನಿಮಾನಲ್ಲಿ ನಟಿಸಿದ್ದ ಕನ್ನಡದ ಹಾಸ್ಯ ಕಲಾವಿದ ರಾಕೇಶ್ ಪೂಜಾರಿ ಹೃದಯಾಘಾತದಿಂದ ಮೃತಪಟ್ಟರು. ಕೆಲ ದಿನಗಳ ಹಿಂದಷ್ಟೆ ವಿಜು ವಿಕೆ ಎಂಬ ಕೇರಳದ ಕಲಾವಿದ ಮೃತಪಟ್ಟರು. ಅವರು ಸಹ ‘ಕಾಂತಾರ’ ಸಿನಿಮಾನಲ್ಲಿ ನಟಿಸುತ್ತಿದ್ದರು. ಇದೆಲ್ಲದರ ಬಳಿಕ ಈಗ ದೋಣಿಯೇ ಮುಗಿಚಿದೆ. ಆದರೆ ಯಾವುದೇ ಜೀವಹಾನಿ ಸಂಭವಿಸಿದ ವರದಿ ಈ ವರೆಗೆ ಆಗಿಲ್ಲ.

 

 

 

 

 

 


 

 

Continue Reading
Click to comment

Leave a Reply

Your email address will not be published. Required fields are marked *

Advertisement