Connect with us

ಇತರ

ಮಹಿಳೆಯ ನಗ್ನಳಾಗುವಂತೆ ಮಾಡಿ ವೀಡಿಯೋ, ಅತ್ಯಾಚಾರಕ್ಕೆ ಯತ್ನ: ಕೇರಳದ ಪೆರಿಂಗೋಟ್ಟುಕ್ಕಾರ ದೇವಸ್ಥಾನದ ಅರ್ಚಕ ಅರೆಸ್ಟ್

Published

on

ಬೆಂಗಳೂರು: ಮಹಿಳೆಯನ್ನು ಅತ್ಯಾಚಾರಕ್ಕೆ ಯತ್ನಿಸಿದ್ದಲ್ಲದೆ, ಆಕೆಯನ್ನು ಬೆತ್ತಲೆಯಾಗುವಂತೆ ಮಾಡಿ ಅದನ್ನು ವಿಡಿಯೋ ಮಾಡಿ ಬ್ಲ್ಯಾಕ್​ಮೇಲ್ ಮಾಡಿರುವ ಆರೋಪದಲ್ಲಿ ಕೇರಳದ ಪೆರಿಂಗೋಟ್ಟುಕ್ಕಾರ ದೇವಸ್ಥಾನದ ಅರ್ಚಕ ಅರುಣ್ ಎಂಬಾತನನ್ನು ಬೆಂಗಳೂರಿನ ಬೆಳ್ಳಂದೂರು ಠಾಣೆ ಪೊಲೀಸರು ಬಂಧಿಸಿದ್ದಾರೆ. ಮತ್ತೊಬ್ಬ ಆರೋಪಿ, ಮುಖ್ಯ ಅರ್ಚಕ ಉನ್ನಿ ದಾಮೋದರನ್ ಪರಾರಿಯಾಗಿದ್ದು, ಆತನಿಗಾಗಿ ಪೊಲೀಸರು ಶೋಧ ಆರಂಭಿಸಿದ್ದಾರೆ.

ಪೂಜೆ ಮಾಡಿಸಲೆಂದು ಕೇರಳದ ಪೆರಿಂಗೋಟ್ಟುಕ್ಕಾರ ದೇವಸ್ಥಾನಕ್ಕೆ ತೆರಳಿದ್ದ ಮಹಿಳೆಗೆ ಮಾಟ ಮಾಂತ್ರದ ಬೆದರಿಕೆಯೊಡ್ಡಿ ಮುಖ್ಯ ಅರ್ಚಕ ಹಾಗೂ ಮತ್ತೋರ್ವ ಅರ್ಚಕ ಕೃತ್ಯ ಎಸಗಿದ್ದಾರೆ ಎಂದು ಆರೋಪಿಸಲಾಗಿದೆ.

 

.ಕೌಟುಂಬಿಕ ಸಮಸ್ಯೆಯಿಂದ ಬಳಲುತ್ತಿದ್ದ ಈ ಮಹಿಳೆಯು ಕೇರಳ ರಾಜ್ಯದ ಪೆರಿಂಗೋಟ್ಟುಕ್ಕಾರ ದೇವಾಲಯದ ಬಗ್ಗೆ ಕೇಳಿ ತಿಳಿದಿದ್ದರು. ಆದ್ದರಿಂದ ಅಲ್ಲಿಗೆ ಪೂಜೆ ಮಾಡಿಸಲೆಂದು ತೆರಳಿದ್ದರು. ಈ ವೇಳೆ ಪರಿಚಯವಾಗಿದ್ದ ಅರ್ಚಕರು, ಪೂಜೆಯ ಹೆಸರಿನಲ್ಲಿ ಮತ್ತು ಮಾಟ-ಮಂತ್ರ ಹೆಸರಿನಲ್ಲಿ ಮಹಿಳೆಯೊಂದಿಗೆ ವಾಟ್ಸ್​​ಆ್ಯಪ್​ ವಿಡಿಯೋ ಕಾಲ್ ಮೂಲಕ ಅಸಭ್ಯವಾಗಿ ವರ್ತಿಸಿದ್ದಾರೆ. ಅಲ್ಲದೆ, ಮತ್ತೊಂದು ಪೂಜೆ ಮಾಡಿಸುವುದಾಗಿ ಕರೆಸಿಕೊಂಡು ಅಸಹಜ ಲೈಂಗಿಕ ಕ್ರಿಯೆಗೆ ಒತ್ತಾಯಿಸಿದ್ದಾರೆ ಎಂದು ಬೆಳ್ಳಂದೂರು ಠಾಣೆ ಪೊಲೀಸರಿಗೆ ನೀಡಿದ ದೂರಿನಲ್ಲಿ ಸಂತ್ರಸ್ತೆ ಮಹಿಳೆ ಉಲ್ಲೇಖಿಸಿದ್ದಾರೆ.

 

ಪೂಜೆಗೆಂದು ದೇವಸ್ಥಾನಕ್ಕೆ ಬಂದ ಸಂದರ್ಭದಲ್ಲಿ, ಸಂತ್ರಸ್ತೆಗೆ ಅರ್ಚಕರೊಂದಿಗೆ ಮಲಯಾಳಂ ಭಾಷೆಯಲ್ಲಿ ಮಾತನಾಡಲು ಸಾಧ್ಯವಾಗಲಿಲ್ಲ. ಆಕೆಗೆ ತಮಿಳು ಮತ್ತು ಕನ್ನಡವಷ್ಟೇ ಬರುತ್ತಿತ್ತು. ಆಗ ಅರ್ಚಕ ಅರುಣ್ ಪರಿಚಯವಾಗಿದ್ದಾನೆ. ಆತ ತಮಿಳಿನಲ್ಲಿ ಮಾತನಾಡಿ ಅದನ್ನು ಅರ್ಚಕರಿಗೆ ತಿಳಿಸಿದ್ದಾನೆ. ಬಳಿಕ 24 ಸಾವಿರ ರೂ. ಕೊಟ್ಟರೆ ಪೂಜೆ ಮಾಡಿಸಿಕೊಡುವುದಾಗಿ ಭರವಸೆ ನೀಡಿದ್ದಾನೆ. ಮೊಬೈಲ್ ಸಂಖ್ಯೆ ಪಡೆದುಕೊಂಡಿದ್ದ ಆತ, ಸಂತ್ರಸ್ತೆ ಬೆಂಗಳೂರಿಗೆ ಬಂದ ಬಳಿಕ ಹಲವು ಬಾರಿ ಕರೆ ಮಾಡಿದ್ದ.

ಸಂತ್ರಸ್ತೆಗೆ ಕರೆ ಮಾಡಿದ್ದ ಅರುಣ್, ‘ನಿಮ್ಮ ಮೇಲೆ ಮಾಟ-ಮಂತ್ರ ಆಗಿದೆ. ಅದನ್ನು ಹೋಗಲಾಡಿಸಲು ಪೂಜೆ ಮಾಡುತ್ತೇನೆ. ಹೇಳಿದಂತೆ ನೀವು ಮಾಡಬೇಕು’ ಎಂದಿದ್ದ ಎಂದು ದೂರಿನಲ್ಲಿ ತಿಳಿಸಲಾಗಿದೆ. ಬಳಿಕ ವಾಟ್ಸ್​​ಆ್ಯಪ್ ವಿಡಿಯೋ ಕಾಲ್​​ನಲ್ಲಿ ನಗ್ನನಾಗಿದ್ದಲ್ಲದೆ, ಮಹಿಳೆಗೂ ಬಲವಂತ ಮಾಡಿದ್ದಾನೆ. ಆದರೆ ಸಂತ್ರಸ್ತೆ ಅದಕ್ಕೆ ಒಪ್ಪಿರಲಿಲ್ಲ. ಇದರಿಂದ ಕೋಪಗೊಂಡಿದ್ದ ಆತ, ಮಕ್ಕಳ ಮೇಳೆ ಮಾಟ ಮಂತ್ರ ಮಾಡಿಸುವೆ ಎಂದು ಬೆದರಿಕೆ ಹಾಕಿ, ಆಕೆಯೂ ನಗ್ನಳಾಗುವಂತೆ ಮಾಡಿದ್ದಾನೆ. ಅದಾದ ನಂತರ ಮತ್ತೆ ವಿಶೇಷ ಪೊಜೆಗೆಂದು ದೇವಸ್ಥಾನಕ್ಕೆ ಬರುವಂತೆ ತಿಳಿಸಿದ್ದ. ಬ್ಲ್ಯಾಕ್​ಮೇಲ್​​ಗೆ ಹೆದರಿ ಮಹಿಳೆ ದೇಗುಲಕ್ಕೆ ತೆರಳಿದ್ದರು. ಆಕೆಯ ಬಳಿ ಪೂಜೆ ಮಾಡಿಸಿದ್ದ ಅರುಣ್ ಹಾಗೂ ಮುಖ್ಯ ಅರ್ಚಕ, ಧಾರ್ಮಿಕ ಕ್ರಿಯೆ ಇದೆ ಎಂದು ಬಲವಂತವಾಗಿ ಕಾರಿನಲ್ಲಿ ಕಾಡಿಗೆ ಕರೆದುಕೊಂಡು ಹೋಗಿ ಅಸ್ವಾಭಾವಿಕ ಲೈಂಗಿಕ ಕ್ರಿಯೆಗೆ ಮುಂದಾಗಿದ್ದರು ಎಂದು ದೂರಿನಲ್ಲಿ ತಿಳಿಸಲಾಗಿದೆ.

 

Continue Reading
Click to comment

Leave a Reply

Your email address will not be published. Required fields are marked *

Advertisement
Exit mobile version