Published
11 months agoon
By
Akkare News
ಯೆಮೆನ್ನಲ್ಲಿ ಜು.16 ರಂದು ಗಲ್ಲುಶಿಕ್ಷೆಗೆ ಗುರಿಯಾಗ ಬೇಕಾಗಿದ್ದ ಕೇರಳ ಮೂಲದ ನರ್ಸ್ ನಿಮಿಷ ಪ್ರಿಯಾ ಮರಣದಂಡನೆಯನ್ನು ತಾತ್ಕಾಲಿಕವಾಗಿ ಮುಂದೂಡಿಕೆ ಮಾಡಲಾಗಿದೆ. ಮಲಿಯಾಳಿ ನರ್ಸ್ ಅನ್ನು ಉಳಿಸುವುದಕ್ಕೆ ಮಾಡಿದ ಪ್ರಯತ್ನ ನಡೆದಿದೆ. ಮುಂದಿನ ಮಾತುಕತೆಯವರೆಗೂ ನರ್ಸ್ ನಿಮಿಷಾ ಪ್ರಿಯಾ ಜೀವಂತವಾಗಿ ಇರುವುದು ಆಕೆಯ ಕುಟುಂಬದವರಿಗೆ ನಿರಾಳ ಮೂಡಿದೆ.


ಯೆಮೆನ್ ಪ್ರಜೆಯನ್ನು ಕೊಲೆ ಮಾಡಿದ ಆರೋಪದಲ್ಲಿ ಗಲ್ಲು ಶಿಕ್ಷೆಗೆ ಗುರಿಯಾಗಿ ಅದೇ ದೇಶದ ಜೈಲಿನಲ್ಲಿದ್ದ ಕೇರಳ ಮೂಲದ ನರ್ಸ್ ನಿಮಿಷಾ ಪ್ರಿಯಾ ಪ್ರಕಣ ಜಾಗತಿಕ ಮಟ್ಟದಲ್ಲಿ ಸುದ್ದಿಯಾಗಿತ್ತು. ಭಾರತದ ನರ್ಸ್ ನಿಮಿಷಾ ಪ್ರಿಯಾಳನ್ನು ಕಾಪಾಡಿಕೊಳ್ಳುವುದು ದೊಡ್ಡ ಸವಾಲಾಗಿತ್ತು. ನಾಳೆ ಜು.16 ಕ್ಕೆ ಗಲ್ಲು ಶಿಕ್ಷೆ ಆಗುತ್ತದೆ ಎನ್ನಲಾಗಿತ್ತು.







