Connect with us

ಇತ್ತೀಚಿನ ಸುದ್ದಿಗಳು

ರಾಜ್ಯ ಆಗಮ ಶಿಕ್ಷಣದಲ್ಲಿ ಅತ್ಯಧಿಕ ಅಂಕ ಪಡೆದ ಪುತ್ತೂರಿನ ವಾಸ್ತು ತಜ್ಞ ಮತ್ತು ನಗರ ಸಭೆಯ ಸದಸ್ಯ ಪಿ.ಜಿ ಜಗನ್ನಿವಾಸ ರಾವ್.

Published

on

ಪುತ್ತೂರು: ಕರ್ನಾಟಕ ರಾಜ್ಯ ಆಗಮ ಶಿಕ್ಷಣ ಮತ್ತು ಪರೀಕ್ಷಾ ಸಮಿತಿ, ಹಿಂದೂ ಧಾರ್ಮಿಕ ಹಾಗೂ ಧರ್ಮದಾಯ ದತ್ತಿಗಳ ಇಲಾಖೆ ಇದರ ಆಗಮ ಘಟಿಕೋತ್ಸವ 2025 ಬೆಂಗಳೂರಿನ ಶ್ರೀ ಶೃಂಗೇರಿ ಶಾರದಾ ಕಲ್ಯಾಣ ಮಂಟಪದಲ್ಲಿ ನಡೆಯಿತು.

ಈ ಸಂದರ್ಭದಲ್ಲಿ ಏಳು ಆಗಮ ವಿಭಾಗಗಳ ಸುಮಾರು 2000 ವಿದ್ಯಾರ್ಥಿಗಳಲ್ಲಿ ಅತ್ಯಧಿಕ ಅಂಕಗಳನ್ನು ಗಳಿಸಿದ 43 ವಿದ್ಯಾರ್ಥಿಗಳ ಪೈಕಿ ವಾತುಲಾಗಮ ಪ್ರವೀಣ ಪದವಿಯನ್ನು ಪೊಳಲಿ ಗಿರಿಪ್ರಕಾಶ್ ತಂತ್ರಿ ಹಾಗು ಪುತ್ತೂರಿನ ವಾಸ್ತುತಜ್ಞ ಪಿ.ಜಿ ಜಗನ್ನಿವಾಸ ರಾವ್ ರವರಿಗೆ ಕರ್ನಾಟಕ ಸರಕಾರದ ಮುಜರಾಯಿ ಮಂತ್ರಿಗಳಾದ ರಾಮಲಿಂಗ ರೆಡ್ಡಿ ಹಾಗು ಆಯುಕ್ತ ಡಾ.ವೆಂಕಟೇಶ ಎಂ.ವಿ (ಐಎಎಸ್), ರಾಜ್ಯ ಧಾರ್ಮಿಕ ಪರಿಷತ್ ಸದಸ್ಯೆ ಮಲ್ಲಿಕಾ ಪಕ್ಕಳ ಮೊದಲಾದ ಗಣ್ಯರ ಉಪಸ್ಥಿತಿಯಲ್ಲಿ ಆಗಮ ಶಾಸ್ತ್ರ ಪ್ರಮಾಣ ಪತ್ರ, ಪದಕ ಹಾಗು ನಗದು ಬಹುಮಾನ ನೀಡಿ ಗೌರವಿಸಲಾಯಿತು.


 

ಪಿ ಜಿ ಜಗನ್ನಿವಾಸ ರಾವ್ ರವರು ಈ ಹಿಂದೆ ಮಂಗಳೂರು ವಿಶ್ವವಿದ್ಯಾನಿಲಯದ ವೇದತಂತ್ರಾಗಮ ಡಿಪ್ಲೋಮಾ ಪದವಿಯನ್ನೂ ಪಡೆದಿದ್ದರು. ಇವರು ಪುತ್ತೂರು ನಗರಸಭಾ ಸದಸ್ಯರಾಗಿದ್ದು, ಹಲವಾರು ದೇವಾಲಯ, ದೈವಸ್ಥಾನಕ್ಕೆ ಸಂಬಂಧಿಸಿ ವಾಸ್ತು ವಿಚಾರದಲ್ಲಿ ಸೇವೆ ಸಲ್ಲಿಸಿದ್ದಾರೆ.

.


 

Continue Reading
Click to comment

Leave a Reply

Your email address will not be published. Required fields are marked *

Advertisement
Exit mobile version