Published
10 months agoon
By
Akkare News
ಬೆಂಗಳೂರು: ಸಚಿವ ಸ್ಥಾನಕ್ಕೆ ಸಹಕಾರಿ ಸಚಿವ ರಾಜಣ್ಣ ರಾಜೀನಾಮೆ ನೀಡಿದ್ದಾರೆ. ಹೈಕಮಾಂಡ್ ಸೂಚನೆಯ ಬೆನ್ನಲ್ಲೇ ರಾಜಣ್ಣ ಸಚಿವ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದಾರೆ.
ಕೆಎನ್ ರಾಜಣ್ಣ ಅವರ ಪುತ್ರ ರಾಜೇಂದ್ರ ಅವರು ರಾಜೀನಾಮೆ ಪತ್ರವನ್ನು ಸಿಎಂ ಸಿದ್ದರಾಮಯ್ಯಗೆ ನೀಡಿದ್ದರು. ಹೀಗಾಗಿ ಸಿಎಂ ರಾಜೀನಾಮೆ ಅಂಗೀಕಾರಿಸುತ್ತಾರಾ ಇಲ್ವೋ ಎಂಬ ಪ್ರಶ್ನೆ ಎದ್ದಿತ್ತು. ಆದರೆ ಅಂತಿಮವಾಗಿ ಆಪ್ತ ರಾಜಣ್ಣ ಅವರ ರಾಜೀನಾಮೆಯನ್ನು ಸಿಎಂ ಸಿದ್ದರಾಮಯ್ಯ ಅಂಗೀಕರಿಸಿದ್ದಾರೆ.
ಆರಂಭದಲ್ಲಿ ಸೆಪ್ಟೆಂಬರ್ ಕ್ರಾಂತಿಯ ಹೇಳಿಕೆ ನೀಡಿ ರಾಜಣ್ಣ ಸಂಚಲನ ಮೂಡಿಸಿದ್ದರು. ರಾಹುಲ್ ಗಾಂಧಿ (Rahul Gandhi) ಮತಗಳ್ಳತನ ಆರೋಪ ಮಾಡಿದ ನಂತರ ರಾಜಣ್ಣ ನಮ್ಮ ಅವಧಿಯಲ್ಲಿ ಮತಪಟ್ಟಿ ಸಿದ್ಧವಾಗಿತ್ತು ಎಂದು ಹೇಳಿದ್ದರು.