Published
7 months agoon
By
Akkare News
ರಾಜ್ಯಕ್ಕೆ ಮರಳುವ ಬಂಗಾಳದ ವಲಸೆ ಕಾರ್ಮಿಕರು ಮಾಸಿಕ 5 ಸಾವಿರ ರೂಪಾಯಿ ಧನ ಸಹಾಯ ಪಡೆಯಲಿದ್ದಾರೆ ಎಂದು ಪಶ್ವಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಸೋಮವಾರ (ಆ.18) ಘೋಷಿಸಿದ್ದಾರೆ.
ರಾಜ್ಯ ಆಡಳಿತ ಕೇಂದ್ರವಾದ ನಬನ್ನಾದಲ್ಲಿ ನಡೆದ ಸಚಿವ ಸಂಪುಟ ಸಭೆಯ ನಂತರ ಮಾತನಾಡಿದ ಮಮತಾ ಬ್ಯಾನರ್ಜಿ, “ಇತರ ರಾಜ್ಯಗಳಿಂದ ಪಶ್ಚಿಮ ಬಂಗಾಳಕ್ಕೆ ಹಿಂದಿರುಗುವ ವಲಸೆ ಕಾರ್ಮಿಕರಿಗೆ ಮುಂದಿನ 12 ತಿಂಗಳವರೆಗೆ ಮಾಸಿಕ 5,000 ರೂ.ಗಳ ಆರ್ಥಿಕ ಸಹಾಯವನ್ನು ನೀಡಲಾಗುವುದು ಮತ್ತು ‘ಖಾದ್ಯ ಸತಿ’ ಮತ್ತು ‘ಸ್ವಸ್ಥ ಸತಿ’ ನಂತಹ ಸಾಮಾಜಿಕ ಪ್ರಯೋಜನಗಳನ್ನು ಅವರು ಪಡೆಯಬಹುದು ಎಂದು ಹೇಳಿದ್ದಾರೆ.
ಈ ಸೌಲಭ್ಯಗಳನ್ನು ಜಾರಿಗೆ ತರಲು ‘ಶ್ರಮಶ್ರೀ’ ಎಂಬ ಹೊಸ ಯೋಜನೆಯನ್ನು ಘೋಷಿಸಿದ್ದಾರೆ.
“ಈ ಯೋಜನೆಯು ಬಂಗಾಳದ ವಲಸೆ ಕಾರ್ಮಿಕರಿಗೆ ಮಾತ್ರ ಅನ್ವಯವಾಗುತ್ತದೆ. ರಾಜ್ಯಕ್ಕೆ ಮರಳುವವರು ಪ್ರಯಾಣ ಸಹಾಯದೊಂದಿಗೆ 5,000 ರೂ.ಗಳ ಒಂದು ಮೊದಲ ಪಾವತಿಯನ್ನು ಪಡೆಯಲಿದ್ದಾರೆ. ಇದು ಪುನರ್ವಸತಿ ಭತ್ಯೆಯಾಗಿದೆ. ಅವರಿಗೆ ಹೊಸ ಕೆಲಸದ ವ್ಯವಸ್ಥೆ ಮಾಡುವವರೆಗೆ, ಕನಿಷ್ಠ ಒಂದು ವರ್ಷದವರೆಗೆ ತಿಂಗಳಿಗೆ 5,000 ರೂ.ಗಳ ಆರ್ಥಿಕ ಸಹಾಯವನ್ನು ಸಹ ನೀಡಲಾಗುವುದು” ಎಂದು ಮಮತಾ ಬ್ಯಾರ್ಜಿ ತಿಳಿಸಿದ್ದಾರೆ.
‘