Connect with us

ಇತರ

ಸೌಪರ್ಣಿಕಾ ನದಿಯಲ್ಲಿ ನಾಪತ್ತೆಯಾಗಿದ್ದ ಮಹಿಳೆಯ ಶವ ಕೊಳೆತ ಸ್ಥಿತಿಯಲ್ಲಿ ಪತ್ತೆ

Published

on

ಉಡುಪಿ: ಕೊಲ್ಲೂರಿನಲ್ಲಿ ಸೌಪರ್ಣಿಕಾ ನದಿಗೆ ಈಜಲು ಇಳಿದು ನಾಪತ್ತೆಯಾಗಿದ್ದ ಬೆಂಗಳೂರಿನ ಮಹಿಳೆಯ ಶವ ಶನಿವಾರ ಕೊಳೆತ ಸ್ಥಿತಿಯಲ್ಲಿ ಪತ್ತೆಯಾಗಿದೆ. ಅವರನ್ನು ಬೆಂಗಳೂರು ತ್ಯಾಗರಾಜನಗರ ನಿವಾಸಿ ಸಿ.ಆರ್.ಗೋವಿಂದರಾಜು-ವಿಮಲಾ ಎಂಬವರ ಪುತ್ರಿ ವಸುಧಾ ಚಕ್ರವರ್ತಿ (46) ಎಂದು ಗುರುತಿಸಲಾಗಿದೆ.

ಆ. 27ರಂದು ಕೊಲ್ಲೂರಿಗೆ ಕಾರಿನಲ್ಲಿ ಬಂದಿದ್ದ ಅವರು ನಂತರ ಕಾಣೆಯಾಗಿದ್ದರು. ಪೊಲೀಸರು ಅಗ್ನಿಶಾಮಕ ದಳ ಮತ್ತು ಮುಳುಗು ತಜ್ಞ ಈಶ್ವರ್ ಮಲ್ಪೆ ತಂಡ 2 ದಿನ ನದಿಯಲ್ಲಿ ಹುಡುಕಾಡಿದ್ದರು. ಆದರೆ ನದಿಯಲ್ಲಿ ಮಳೆಯ ನೀರು ತುಂಬಿ ಹರಿಯುತ್ತಿದ್ದರಿಂದ ಹುಡುಕಾಟ ಫಲಪ್ರದವಾಗಿರಲಿಲ್ಲ. ಶನಿವಾರ ಮಧ್ಯಾಹ್ನ 3 ಗಂಟೆಗೆ ಕೊಲ್ಲೂರಿನಿಂದ ಸುಮಾರು 3 ಕಿ.ಮೀ. ದೂರದ ಮಾವಿನಕೆರೆ ಎಂಬಲ್ಲಿ ನದಿಯಲ್ಲಿ ಗಿಡಮರಗಳಿಗೆ ಸಿಲುಕಿದ್ದ ಕೊಳೆತ ಶವ ಪತ್ತೆಯಾಗಿದೆ.

 

 

Continue Reading
Click to comment

Leave a Reply

Your email address will not be published. Required fields are marked *

Advertisement
Exit mobile version