Published
6 months agoon
By
Akkare News


ಕಳೆದ ಲೋಕಸಭಾ ಚುನಾವಣೆಯ ವೇಳೆ ಸಂಸದರು, ರಾಜ್ಯಧ್ಯಕ್ಷರು ಮತ್ತು ಜಿಲ್ಲಾಧ್ಯಕ್ಷರು ನೀಡಿದ್ದ ಭರವಸೆಗಳು ಈಡೇರದಿರುವುದು ಬೂತ್ ಮಟ್ಟದ ಕಾರ್ಯಕರ್ತರಲ್ಲಿ ಆಕ್ರೋಶವನ್ನುಂಟು ಮಾಡಿದೆ ಎಂದು ಸಭೆಯಲ್ಲಿ ಪ್ರಸ್ತಾಪಿಸಲಾಯಿತು. “ಕೇಸರಿ ಶಾಲನ್ನು ಹಾಕುವ ದೇವದುರ್ಲಭ ಕಾರ್ಯಕರ್ತರನ್ನು ಅವಮಾನಿಸಿ ಹೇಳಿಕೆ ನೀಡುವ ಸಂಘ ಮತ್ತು ಪಕ್ಷದ ನಾಯಕರ ನಡೆಗೆ ಸಭೆಯಲ್ಲಿ ತೀವ್ರ ಆಕ್ಷೇಪ ವ್ಯಕ್ತವಾಯಿತು.


ಸಮಸ್ಯೆಯನ್ನು ಬಗೆಹರಿಸಲು ಪಕ್ಷದ ಮತ್ತು ಸಂಘದ ಹಿರಿಯರು ತಕ್ಷಣವೇ ಸಮನ್ವಯ ಸಾಧಿಸಿ ಪರಿಹಾರ ಕಂಡುಕೊಳ್ಳಬೇಕು ಎಂದು ಈ ಸಭೆಯಲ್ಲಿ ನಿರ್ಣಯಿಸಲಾಯಿತು. ಮುಂದಿನ ಕೆಲಸ ಕಾರ್ಯಗಳ ಬಗ್ಗೆ ವ್ಯಾಪಕ ಚರ್ಚೆಗಳು ನಡೆದು, ಟ್ರಸ್ಟ್ನ ಅಧ್ಯಕ್ಷರು ಮತ್ತು ಅವರ ತಂಡ ತೆಗೆದುಕೊಳ್ಳುವ ಯಾವುದೇ ನಿರ್ಧಾರಕ್ಕೆ ತಾವು ಬದ್ಧರಾಗಿರುವುದಾಗಿ ಪದಾಧಿಕಾರಿಗಳು ಸರ್ವಾನುಮತದಿಂದ ತಿಳಿಸಿದರು.











