Connect with us

ರಾಜಕೀಯ

ಶಾಸಕರಿಗೆ ಬಂಪರ್: ಪ್ರತಿ ವಿಧಾನಸಭಾ ಕ್ಷೇತ್ರಕ್ಕೆ 50 ಕೋಟಿ ರೂ ಅನುದಾನ; ಸಿಎಂ ಸಿದ್ದರಾಮಯ್ಯ ಘೋಷಣೆ!

Published

on

ಬೆಂಗಳೂರು : ಇತ್ತೀಚೆಗೆ ಶಾಸಕರ ಕ್ಷೇತ್ರಗಳಿಗೆ ತಲಾ 50 ಕೋಟಿ ರೂ. ವಿಶೇಷ ಅನುದಾನ ಬಿಡುಗಡೆ ಮಾಡುವುದಾಗಿ ಹೇಳಿದ್ದ ಸಿಎಂ ಸಿದ್ದರಾಮಯ್ಯ ಇದೀಗ ಅದಕ್ಕೆ ಒಪ್ಪಿಗೆ ಸೂಚಿಸಿದ್ದಾರೆ. ಬೆಂಗಳೂರು ಶಾಸಕರ ಜೊತೆ ಬುಧವಾರ ಸಭೆ ಮಾಡಿರುವ ಸಿಎಂ ಸಿದ್ದರಾಮಯ್ಯ, ರಸ್ತೆ ದುರಸ್ತಿ, ನೂತನ ರಸ್ತೆ ನಿರ್ಮಾಣಕ್ಕೆ ಅನುದಾನ ಬಳಸುವಂತೆ ಶಾಸಕರಿಗೆ ಸೂಚನೆ ನೀಡಿದ್ದಾರೆ.

ವಿಧಾನ ಸೌಧದಲ್ಲಿ ನಿನ್ನೆ ಸಿಎಂ ಸಿದ್ದರಾಮಯ್ಯ ಪ್ರಮುಖವಾಗಿ ಅನುದಾನ ಹಂಚಿಕೆ ವಿಚಾರವಾಗಿ ಬೆಂಗಳೂರು ಭಾಗದ ಶಾಸಕರೊಂದಿಗೆ ಚರ್ಚೆ ಮಾಡಿದರು. ಈ ವೇಳೆ ಶಾಸಕರ ಕುಂದು ಕೊರತೆಯನ್ನ ಆಲಿಸಿದರು. ಈಗಾಗಲೇ ಮೂರು ಹಂತದಲ್ಲಿ ಸಭೆ ಮಾಡಿದ್ದು, ಶಾಸಕರು, ಪರಿಷತ್ ಸದಸ್ಯರ ಜೊತೆಗೂ ಸಿಎಂ ಮೀಟಿಂಗ್ ಮಾಡಿದರು.

ಈ ಕುರಿತಾಗಿ ಟ್ವೀಟ್​ ಮಾಡಿರುವ ಸಿಎಂ ಸಿದ್ದರಾಮಯ್ಯ, ಬೆಂಗಳೂರು ನಗರ ಜಿಲ್ಲಾ ವ್ಯಾಪ್ತಿಯ ಸಚಿವರು ಹಾಗೂ ಶಾಸಕರ ಜೊತೆ ಸುದೀರ್ಘ ಸಭೆ ನಡೆಸಿ, ಗ್ಯಾರಂಟಿ ಯೋಜನೆ ಮತ್ತು ಅಭಿವೃದ್ಧಿ ಕಾರ್ಯಕ್ರಮಗಳ ಪ್ರಗತಿಯ ಮಾಹಿತಿ ಪಡೆದು, ಕ್ಷೇತ್ರದಲ್ಲಿ ಆಗಬೇಕಿರುವ ಕೆಲಸ ಕಾರ್ಯಗಳ ಬೇಡಿಕೆಯನ್ನು ಆಲಿಸಿ, ಅಗತ್ಯ ಸಹಕಾರ ಹಾಗೂ ಅನುದಾನ ಒದಗಿಸುವುದಾಗಿ ತಿಳಿಸಿದ್ದರು.

 

ಸಿಎಂ ಅವರ ಮೂಲಸೌಕರ್ಯ ಅಭಿವೃದ್ಧಿ ಯೋಜನೆ ಅಡಿಯಲ್ಲಿ ಪ್ರತಿಯೊಂದು ವಿಧಾನಸಭಾ ಕ್ಷೇತ್ರಗಳಿಗೆ 50 ಕೋಟಿ ರೂ. ಹಂಚಿಕೆ ಮಾಡಲಾಗಿದೆ. ಹಣ ಬಿಡುಗಡೆ ಮಾಡಲು ಕಾಮಗಾರಿ ವಿವರ ನೀಡುವಂತೆ ಎಲ್ಲಾ ಶಾಸಕರಿಗೆ ಸಿಎಂ ಸಿದ್ದರಾಮಯ್ಯ ಇತ್ತೀಚೆಗೆ ಪತ್ರ ಬರೆದಿದ್ದರು.

 

Continue Reading
Click to comment

Leave a Reply

Your email address will not be published. Required fields are marked *

Advertisement