Connect with us

ಇತ್ತೀಚಿನ ಸುದ್ದಿಗಳು

ಮಾಣಿ – ಸಂಪಾಜೆ ರಾಷ್ಟ್ರೀಯ ಹೆದ್ದಾರಿ ಕಾಮಗಾರಿ : ರಾ.ಹೆದ್ದಾರಿ ಪ್ರಾದೇಶಿಕ ಅಧಿಕಾರಿ ಜೊತೆ ಶಾಸಕ ರೈ ಮಾತುಕತೆ ಆದಷ್ಟು ಶೀಘ್ರ ಕಾಮಗಾರಿ ಪ್ರಾರಂಭಿಸಲು‌ ಮನವಿ

Published

on

ಬೆಂಗಳೂರು: ಮಾಣಿ – ಸಂಪಾಜೆ ಚತುಷ್ಪಥ ರಾ.ಹೆದ್ದಾರಿ 275 ರ ಕಾಮಗಾರಿಗೆ ಡಿಪಿಆರ್ ಮುಗಿದಿದ್ದು ವಾರ್ಷಿಕ ಯೋಜನೆಯಲ್ಲಿ ಹೆದ್ದಾರಿಯನ್ನು ಸೇರ್ಪಡೆಗೊಳಿಸಿ‌ಕಾಮಗಾರಿ ಆರಂಭ ಮಾಡುವಂತೆ ಎನ್‌ಎಚ್ ರೀಜನಲ್ ಆಫೀಸರ್ ನರೇಂದ್ರ ಶರ್ಮ ಅವರಿಗೆ ಶಾಸಕ ಅಶೋಕ್ ರೈ ವಿನಂತಿಸಿದ್ದಾರೆ.

ಬುಧವಾರ ಎನ್‌ಎಚ್ ಪ್ರಾದೇಶಿಕ ಕಚೇರಿಗೆ ಭೇಟಿ ನೀಡಿ‌ ನರೇಂದ್ರ ಶರ್ಮಾ ಅವರ ಜೊತೆ ಮಾತುಕತೆ ನಡೆಸಿದ ಶಾಸಕರು‌ ಡಿಪಿಆರ್ ಮಾಡಿಸಲು ಕರ್ನಾಟಕ ಲೋಕೋಪಯೋಗಿ ಇಲಾಖೆಯಿಂದ 3.10 ಕೋಟಿ‌ ಅನುದಾನ ಬಿಡುಗಡೆಯಾಗಿ ಡಿಪಿಆರ್ ಪ್ರಕ್ರಿಯೆ ಅಂತಿಮ ಹಂತಕ್ಕೆ ತಲುಪಿದೆ.‌ಇನ್ನು‌ಕಾಮಗಾರಿ‌ ಆರಂಭವಾಗಬೇಕಾದಲ್ಲಿ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ‌ ಈ ಯೋಜನೆಯನ್ನು ಸೇರಿಸಿಕೊಳ್ಳುವ ಮೂಲಕ ಕಾಮಗಾರಿ‌ಸ್ಪೀಡಪ್ ಮಾಡಬೇಕೆಂದು‌ ಮನವಿ ಮಾಡಿದರು.

ಮಾಣಿಯಿಂದ ಸಂಪಾಜೆ‌ತನಕ ಚತುಷ್ಫಥ ಹೆದ್ದಾರಿಯಾದಲ್ಲಿ ಈ ಭಾಗ ಅಭಿವೃದ್ದಿಯಾಗಲಿದೆ. ಈ ಹಿಂದೆಯೇ ಇದು ಆಗಬೇಕಿತ್ತು.‌ ಚತುಷ್ಪಥ ಹೆದ್ದಾರಿಯನ್ನಾಗಿ ರೂಪಿಸಬೇಕು‌ಎಂಬ ನಿಟ್ಟಿನಲ್ಲಿ‌ಈಗಾಗಲೇ ಹಲವು ಬಾರಿ ಸಂಬಂದಪಟ್ಟ ಅಧಿಕಾರಿಗಳನ್ನು ಭೇಟಿಯಾಗಿದ್ದೇನೆ.ರಾಜ್ಯ ಸರಕಾರ ಡಿಪಿಆರ್ ಮಾಡಿಸಲಯ ಅನುದಾನವನ್ನು ಬಿಡುಗಡೆ ಮಾಡಿದೆ. ಕಾಮಗಾರಿ ವಿಳಂಬವಾಗಬಾರದು, ಆದಷ್ಟು‌ಶೀಘ್ರ ಕಾಮಗಾರಿ‌ನಡೆದು ಈ ಭಾಗದ‌ಜನರ ಬಹುಕಾಲದ‌ ಕನಸು‌ ನನಸಾಗಬೇಕು.

ಅಶೋಕ್ ರೈ ಶಾಸಕರು,ಪುತ್ತೂರು

 

Continue Reading
Click to comment

Leave a Reply

Your email address will not be published. Required fields are marked *

Advertisement
Exit mobile version