Published
6 months agoon
By
Akkare News
ಬೆಂಗಳೂರು: ಇನ್ನು ಮುಂದೆ ವಿದ್ಯುತ್ ಸಂಪರ್ಕ ಪಡೆಯಲು ಅರ್ಜಿದಾರರು ಸ್ವಾಧೀನ ಪತ್ರ ನೀಡುವ ಅಗತ್ಯ ಇಲ್ಲ. ಈ ನಿಟ್ಟಿನಲ್ಲಿ ಕರ್ನಾಟಕ ವಿದ್ಯುತ್ ನಿಯಂತ್ರಣ ಆಯೋಗ ನಿಯಮಕ್ಕೆ ತಿದ್ದುಪಡಿ ತಂದಿದ್ದು, ಅಧಿಕೃತ ಅಧಿಸೂಚನೆ ಹೊರಡಿಸಲಾಗಿದೆ. ಆ ಮೂಲಕ ರಾಜ್ಯದ ಜನರಿಗೆ ಗುಡ್ ನ್ಯೂಸ್ ನೀಡಿದೆ.
ವಿದ್ಯುತ್ ಸಂಪರ್ಕಕ್ಕಾಗಿ ಸ್ವಾಧೀನ ಪತ್ರ (OC) ನೀಡುವ ನಿಯಮವನ್ನು ರದ್ದುಗೊಳಿಸುವಂತೆ ಸಾರ್ವಜನಿಕರು ಹಾಗೂ ಕೈಗಾರಿಕೋದ್ಯಮಿಗಳಿಂದ ಸಾಕಷ್ಟು ಒತ್ತಾಯ ಇತ್ತು. ಇದೀಗ ಕರ್ನಾಟಕ ವಿದ್ಯುತ್ ನಿಯಂತ್ರಣ ಆಯೋಗ (ಕೆಇಆರ್ ಸಿ) ಈ ಸಂಬಂಧ ನಿಯಮಗಳಿಗೆ ತಿದ್ದುಪಡಿ ತಂದ್ದಿದ್ದು, ವಿದ್ಯುತ್ ಸಂಪರ್ಕಕ್ಕಾಗಿ ಸ್ವಾಧೀನಪತ್ರ ನೀಡುವ ಅಂಶವನ್ನು ರದ್ದುಗೊಳಿಸಿದೆ. ಇದೀಗ ಸ್ವಾಧೀನ ಪತ್ರ ಹೊಂದಿಲ್ಲದವರೂ ವಿದ್ಯುತ್ ಸಂಪರ್ಕ ಪಡೆಯಬಹುದಾಗಿದೆ.
ಈ ಮುಂಚಿನ ನಿಯಮದಂತೆ ವಿದ್ಯುತ್ ಸಂಪರ್ಕ ಬೇಕಾದವರು ಎಸ್ಕಾಂಗಳಿಗೆ ಗುರುತು ಪ್ರಮಾಣಪತ್ರ, ಮಾಲಿಕತ್ವದ ಪ್ರಮಾಣಪತ್ರ ಹಾಗೂ ಸ್ವಾಧೀನ ಪತ್ರವನ್ನು ನೀಡಬೇಕಾಗಿತ್ತು. ಇದೀಗ ನಿಯಮಕ್ಕೆ ತಿದ್ದುಪಡಿ ತಂದ ಹಿನ್ನೆಲೆ ಇನ್ಮುಂದೆ ಅರ್ಜಿದಾರರು ಗುರುತು ಪ್ರಮಾಣಪತ್ರ, ಮನೆ ಮಾಲೀಕತ್ವದ ಪ್ರಮಾಣ ಪತ್ರ ಸಲ್ಲಿಸಿದರೆ ಸಾಕು.