Connect with us

ಇಂದಿನ ಕಾರ್ಯಕ್ರಮ

ಆನಡ್ಕ ಹಾಲು ಉತ್ಪಾದಕರ ಸಂಘಕ್ಕೆ ಜಮೀನು ಮಂಜೂರಾತಿ ಸಚಿವರಿಗೆ ಶಾಸಕ ಅಶೋಕ್ ರೈ ಮನವಿ

Published

on

ಪುತ್ತೂರು:ಪುತ್ತೂರು ವಿಧಾನ ಸಭಾ ಕ್ಷೇತ್ರದ ಪುತ್ತೂರು ತಾಲೂಕಿನ ಶಾಂತಿಗೋಡು ಗ್ರಾಮದ ಆನಡ್ಕ ಹಾಲು ಉತ್ಪಾದಕರ ಮಹಿಳಾ ಸಹಕಾರ ಸಂಘ ಕ್ಕೆ ಕಟ್ಟಡ ನಿರ್ಮಾಣಕ್ಕೆ ನಿವೇಶನ ಮಂಜೂರಾತಿಗೆ ಕಂದಾಯ ಇಲಾಖೆಗೆ ಆದೇಶ ನೀಡುವಂತೆ ಕಂದಾಯ‌ಸಚಿವ ಕೃಷ್ಣ ಬೈರೇ ಗೌಡರಿಗೆ ಶಾಸಕ ಅಶೋಕ್ ರೈ ಮನವಿ ಮಾಡಿದರು.


ಆನಡ್ಕ ಹಾಲು ಉತ್ಪಾದಕರ ಸಹಕಾರಿ ಸಂಘವು ಪುತ್ತೂರು ತಾಲೂಕಿನಲ್ಲಿ ಅತೀ ಹೆಚ್ಚು ಮಹಿಳಾ ಪ್ರತಿನಿಧಿಗಳು ಇರುವ ಸಂಘವಾಗಿರುತ್ತದೆ ಹಾಗೂ ಹಲವಾರು ವರ್ಷಗಳಿಂದ ಸೂಕ್ತವಾದ ಸ್ಥಳವಾಕಾಶ ಇಲ್ಲದೇ ಖಾಸಗಿ ವ್ಯಕ್ತಿಗಳ ಕಟ್ಟಡದಲ್ಲಿ ವ್ಯವಹಾರಿಸಿಕೊಂಡು ಬಂದಿರುತ್ತಾರೆ. ಸದರಿ ಸಂಘಕ್ಕೆ ಯಾವುದೇ ಸ್ಥಿರಾಸ್ತಿ ಇರುವುದಿಲ್ಲ. ಆದ್ದರಿಂದ ಪುತ್ತೂರು ತಾಲೂಕು ನರಿಮೊಗ್ರು ಗ್ರಾಮ ಪಂಚಾಯತ್ ಶಾಂತಿಗೋಡು ಗ್ರಾಮದ ಸ.ನಂ:249/1ಪಿ ರಲ್ಲಿ 0.15 ಸೆಂಟ್ಸ್ ಜಮೀನನ್ನು ಆನಡ್ಕ ಹಾಲು ಉತ್ಪಾದಕರ ಮಹಿಳಾ ಸಹಕಾರ ಸಂಘ ನಿ. ಮಂಜೂರುಗೊಳಿಸುವಂತೆ ಇಲಾಖೆಗೆ ಶೀಫಾರಸ್ಸು ಮಾಡುವಂತೆ ಸಚಿವರಿಗೆ ಶಾಸಕರು ಮನವಿ ಮಾಡಿದರು.



Continue Reading
Click to comment

Leave a Reply

Your email address will not be published. Required fields are marked *

Advertisement
Exit mobile version