Published
5 months agoon
By
Akkare News
ಪುತ್ತೂರು: ಪುತ್ತೂರು ತಾಲೂಕು ವ್ಯಾಪ್ತಿಯಲ್ಲಿ ತಿರಸ್ಕೃತಗೊಂಡ 94ಸಿ ಮತ್ತು 94ಸಿಸಿ ಕಡತ ಮರು ಪರಿಶೀಲಿಸಿ ಅರ್ಹರಿಗೆ ಹಕ್ಕು ಪತ್ರ ನೀಡುವಂತೆ ಶಾಸಕ ಅಶೋಕ್ ರೈ ಅವರು ಕಂದಾಯಸಚಿವ ಕೃಷ್ಣಬೈರೇಗೌಡರಿಗೆ ಬುಧವಾರ ಮನವಿ ಸಲ್ಲಿಸಿದರು.ಬೆಂಗಳೂರಿನಲ್ಲಿ ಸಚಿವರನ್ನು ಭೇಟಿಯಾದ ಶಾಸಕರು ಪುತ್ತೂರು ತಾಲೂಕಿನಲ್ಲಿ 94ಸಿ ಮತ್ತು 94ಸಿಸಿ ಯ ಸುಮಾರು 8420 ಕಡತ ಸರಿಯಾಗಿ ಪರಿಶೀಲನೆ ಮಾಡದೆ ಈ ಹಿಂದೆ ಕಡತವನ್ನು ರದ್ದು ಮಾಡಿರುತ್ತಾರೆ.
ಸುಮಾರು 8420 94 ಸಿ ಮತ್ತು 94 ಸಿ ಸಿ ಅರ್ಜಿಗಳನ್ನು ಈ ಹಿಂದೆ ತಿರಸ್ಕೃತಗೊಳಿಸಿದ್ದಾರೆ . ಅರ್ಜಿ ಹಾಕಿದ್ದ ಫಲಾನುಭವಿಗಳಿಗೆ ಮನೆ ಇದ್ದರೂ ಯಾಕೆ ತಿರಸ್ಕಾರ ಮಾಡಿದ್ದಾರೆ? ಬಡವರು ಕೇಳಿದ್ದು ಅವರು ಮನೆ ಕಟ್ಟಿ ವಾಸ್ತವ್ಯವಿರುವ ಮನೆಯ ಅಡಿಸ್ಥಳವನ್ನು ಅದನ್ನು ಯಾಕೆ ಕೊಡಲು ಸಾಧ್ಯವಾಗಿಲ್ಲ? ಎಲ್ಲಾ ಅರ್ಹ ಫಲಾನುಭವಿಗಳಿಗೆ ಹಕ್ಕು ಪತ್ರ ಕೊಡಿಸುವೆ
ಅಶೋಕ್ ರೈ ಶಾಸಕರು,ಪುತ್ತೂರು