Published
5 months agoon
By
Akkare News
ದೆಹಲಿಯ ವಸಂತ್ ಕುಂಜ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಸ್ವಾಮಿ ಪಾರ್ಥಸಾರಥಿ, ಶ್ರೀ ಶಾರದಾ ಇನ್ಸ್ಟಿಟ್ಯೂಟ್ ಆಫ್ ಇಂಡಿಯನ್ ಮ್ಯಾನೇಜ್ಮೆಂಟ್-ರಿಸರ್ಚ್ ಕಾಲೇಜು ನಡೆಸುತ್ತಿರುವ ಸ್ವಾಮೀಜಿ ಸ್ಕಾಲರ್ಶಿಪ್ ಹೆಸರಿನಲ್ಲಿ ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳದ ನೀಡುತ್ತಿದ್ದ ಎಂಬ ಆರೋಪ ಕೇಳಿಬಂದಿದೆ.
ವಿದ್ಯಾರ್ಥಿನಿಯರ ದೂರಿನ ಅನ್ವಯ ವಸಂತ್ ಕುಂಜ್ ನಾರ್ತ್ ಪೊಲೀಸ್ ಠಾಣೆಯಲ್ಲಿ 75(2)/79/351(2) ಬಿಎನ್ಎಸ್ ಕಾಯ್ದೆಯಡಿ ಎಫ್ಐಆರ್ ದಾಖಲಾಗಿದೆ. ಪೊಲೀಸರು ಸಿಸಿಟಿವಿ ಸೇರಿದಂತೆ ಇತರೆ ಸಾಕ್ಷ್ಯಗಳನ್ನು ವಶಕ್ಕೆ ಪಡೆದಿದ್ದಾರೆ. ತನಿಖೆ ವೇಳೆ ನಕಲಿ ನಂಬರ್ ಪ್ಲೇಟ್ನೊಂದಿಗೆ ರಾಜತಾಂತ್ರಿಕ ವಾಹನ ಬಳಸುತ್ತಿದ್ದ ವಿಚಾರವೂ ಬಯಲಾಗಿದ್ದು, ಪೊಲೀಸರು ಪ್ರತ್ಯೇಕ ಪ್ರಕರಣ ದಾಖಲಿಸಿಕೊಂಡಿದ್ದಾರೆ.