Published
5 months agoon
By
Akkare News
ಮಂಗಳೂರು: ನಗರದ ಕಾರ್ ಸ್ಟ್ರೀಟ್ ಬಳಿ ನಡೆದ ಚಿನ್ನಾಭರಣ ದರೋಡೆ ಪ್ರಕರಣಕ್ಕೆ ಸಂಬಂಧಿಸಿದಂತೆ ಐವರು ಆರೋಪಿಗಳನ್ನು ಮಂಗಳೂರು ಪೊಲೀಸರು ಬಂಧಿಸಿದ್ದಾರೆ. ಬಂಧಿತರಲ್ಲಿ ಅಪ್ರಾಪ್ತ ಬಾಲಕನೂ ಸೇರಿದ್ದು. ದರೋಡೆಗೆ ಬೇಕಾದ ಮಾಹಿತಿ ಒದಗಿಸಿದವನು ಇವರೇ ಎಂದು ತಿಳಿದುಬಂದಿದೆ.
ದಿನಾಂಕ 26 09 2025 ರ ಬೆಳಗ್ಗೆ 8:458 ಸುಮಾರಿಗೆ ಚಾಯ್ಸ್ ಗೋಲ್ಡ್ ಅಂಗಡಿಯ ಕೆಲಸಗಾರ ಮುಸ್ತಾಫಾ ಅವರು ತಮ್ಮ ಸ್ಕೂಟರ್ (KA 19EZ 2079) ಸೀಟಿನ ಅಡಿಯಲ್ಲಿ ಚಿನ್ನದ ಗಟ್ಟಿಯನ್ನು ಇಟ್ಟುಕೊಂಡು ಕಾರ್ ಸ್ಟ್ರೀಟ್ನಲ್ಲಿರುವ ವೆಂಕಟರಮಣ ದೇವಸ್ಥಾನದ ಎದುರಿನ ರಸ್ತೆಯಲ್ಲಿ ಸಾಗುತ್ತಿದ್ದಾಗ ಈ ಘಟನೆ ನಡೆದಿದೆ.
ದರೋಡೆಯ ವಿವರಗಳು:
ಇಬ್ಬರು ಆರೋಪಿಗಳು ಸ್ಕೂಟರಿನಲ್ಲಿ ಬಂದು ಮುಸ್ತಾಫಾ ಅವರನ್ನು ತಡೆದಿದ್ದಾರೆ. ಅದೇ ಸಮಯದಲ್ಲಿ, ಇನ್ನಿತರ ಆರೋಪಿಗಳು ಕಾರೊಂದರಲ್ಲಿ ಬಂದು ಮುಸ್ತಾಫಾ ಅವರನ್ನು ಬಲವಂತವಾಗಿ ಕಾರಿಗೆ ಹತ್ತಿಸಿಕೊಂಡು ಹೋಗಿದ್ದಾರೆ. ಕಾರಿನಲ್ಲಿ ಹಲ್ಲೆ ನಡೆಸಿ, ನಂತರ ಮಂಗಳೂರು ಎಕ್ಕೂರು ಬಳಿ ಅವರನ್ನು ಇಳಿಸಿ ಚಿನ್ನದ ಗಟ್ಟಿಯನ್ನು ದರೋಡೆ ಮಾಡಿ ಪರಾರಿಯಾಗಿದ್ದಾರೆ.ಈ ಸಂಬಂಧ ಮಂಗಳೂರು ಉತ್ತರ ಪೊಲೀಸ್ ಠಾಣೆಯಲ್ಲಿ 0 137(2), 310(2) BNS-2023 03 ದಾಖಲಾಗಿ, ತನಿಖೆ ಕೈಗೊಳ್ಳಲಾಗಿತ್ತು. ಕೃತ್ಯದ ಸಿಸಿಟಿವಿ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು.
ಬಂಧಿತ ಆರೋಪಿಗಳು:
ಪೊಲೀಸರು ತೀವ್ರ ಕಾರ್ಯಾಚರಣೆ ನಡೆಸಿ ಸೆ .26ರಂದು ಈ ಕೆಳಗಿನ ಆರೋಪಿಗಳನ್ನು ದಸ್ತಗಿರಿ ಮಾಡಿದ್ದಾರೆ:
ಫಾರಿಶ್ (18 ವರ್ಷ): ಅಬ್ದುಲ್ ಲತೀಫ್ ಅವರ ಪುತ್ರ. ಮುಲ್ತಾಝ್ ಕಾಂಪ್ಲೆಕ್ಸ್, ಒಂದನೇ ಮಹಡಿ, ಕೆ.ಸಿ.ರೋಡ್, ಕೋಟೆಕಾರು ಅಂಚೆ ಮತ್ತು ಗ್ರಾಮ. ಉಳ್ಳಾಲ ತಾಲ್ಲೂಕು ನಿವಾಸಿ.
ಈ ಕಾರ್ಯಾಚರಣೆಯನ್ನು ಉಪ ಪೊಲೀಸ್ ಆಯುಕ್ತರು (ಅಪರಾಧ ಮತ್ತು ಸಂಚಾರ), ಮಂಗಳೂರು ನಗರ, ಸಹಾಯಕ ಪೊಲೀಸ್ ಆಯುಕ್ತರು, ಕೇಂದ್ರ ಉಪವಿಭಾಗ, ಮತ್ತು ಸಹಾಯಕ ಪೊಲೀಸ್ ಆಯುಕ್ತರು, ಸಿಸಿಬಿ ಘಟಕ ಮಂಗಳೂರು ರವರ ಮಾರ್ಗದರ್ಶನದಲ್ಲಿ ಮಂಗಳೂರು ಉತ್ತರ ಪೊಲೀಸ್ ಠಾಣಾ ಅಧಿಕಾರಿ ಸಿಬ್ಬಂದಿ ಹಾಗೂ ಮಂಗಳೂರು ಸಿಸಿಬಿ ಘಟಕದ ಅಧಿಕಾರಿ ಸಿಬ್ಬಂದಿಯವರ ಜಂಟಿ ಕಾರ್ಯಾಚರಣೆ ನಡೆಸಿದ್ದಾರೆ.