Published
5 months agoon
By
Akkare News
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲಾ ಮಟ್ಟದಲ್ಲಿ ನೋಂದಣಿ ಆರಂಭ
ಮಂಗಳೂರು, ಅಕ್ಟೋಬರ್ 8, 2025: ಭಾರತ ಸರ್ಕಾರದ ಯುವ ವ್ಯವಹಾರ ಮತ್ತು ಕ್ರೀಡಾ ಸಚಿವಾಲಯದ ಪ್ರಮುಖ ಉಪಕ್ರಮವಾದ ವಿಕಸಿತ ಭಾರತ ಯುವ ಸಂಸತ್ 2026 ಆರಂಭಗೊಂಡಿದ್ದು, 18 ರಿಂದ 25 ವರ್ಷ ವಯಸ್ಸಿನ ಯುವಕ-ಯುವತಿಯರಿಗೆ ನೋಂದಣಿಗೆ ಕರೆ ನೀಡಲಾಗಿದೆ. ಈ ಸ್ಪರ್ಧೆಯಲ್ಲಿ ಭಾಗವಹಿಸುವವರು ಹಿಂದಿ, ಇಂಗ್ಲಿಷ್ ಅಥವಾ ಕನ್ನಡ ಭಾಷೆಯಲ್ಲಿ ನಿಗದಿತ ಸಮಯದೊಳಗೆ ತಮ್ಮ ಭಾಷಣವನ್ನು ಮಂಡಿಸಬಹುದು.

ಆಸಕ್ತ ಯುವಕ-ಯುವತಿಯರು ಅಕ್ಟೋಬರ್ 12, 2025 ರವರೆಗೆ ಭಾರತ ಸರ್ಕಾರದ ಯುವ ವ್ಯವಹಾರ ಮತ್ತು ಕ್ರೀಡಾ ಸಚಿವಾಲಯದ MY Bharat Portal (mybharat.gov.in) ಮೂಲಕ ತಮ್ಮ ಹೆಸರನ್ನು ನೋಂದಾಯಿಸಿಕೊಳ್ಳಬಹುದು.
ದಕ್ಷಿಣ ಕನ್ನಡ ಜಿಲ್ಲಾ ಮಟ್ಟದ ಸ್ಪರ್ಧೆಯಲ್ಲಿ ಉತ್ತಮ ಪ್ರದರ್ಶನ ನೀಡುವ 10 ಜನ ಆಯ್ಕೆಯಾದವರು ಕರ್ನಾಟಕ ರಾಜ್ಯ ಮಟ್ಟದ ಸ್ಪರ್ಧೆಯಲ್ಲಿ ಭಾಗವಹಿಸಲು ಅವಕಾಶ ಪಡೆಯುತ್ತಾರೆ. ರಾಜ್ಯ ಮಟ್ಟದ ಸ್ಪರ್ಧೆಯಲ್ಲಿ ಉನ್ನತ ಸಾಧನೆ ಮಾಡುವ ಮೂವರು ನವದೆಹಲಿಯ ಭಾರತೀಯ ಸಂಸತ್ತಿನಲ್ಲಿ ಆಯೋಜಿಸಲಾಗುವ ರಾಷ್ಟ್ರೀಯ ಮಟ್ಟದ ಕಾರ್ಯಕ್ರಮದಲ್ಲಿ ಭಾಗವಹಿಸುವ ಅವಕಾಶವನ್ನು ಪಡೆಯುತ್ತಾರೆ.
ಹೆಚ್ಚಿನ ಮಾಹಿತಿಗಾಗಿ ಈ ಸಂಖ್ಯೆಗಳನ್ನು ಸಂಪರ್ಕಿಸಬಹುದು: 9961332968, 9448061961.


ಈ ಸ್ಪರ್ಧೆಯು ಯುವಕರಿಗೆ ತಮ್ಮ ನಾಯಕತ್ವ ಗುಣಗಳನ್ನು ಪ್ರದರ್ಶಿಸಲು ಮತ್ತು ರಾಷ್ಟ್ರ ನಿರ್ಮಾಣದಲ್ಲಿ ಭಾಗವಹಿಸಲು ಒಂದು ಅತ್ಯುತ್ತಮ ವೇದಿಕೆಯಾಗಿದೆ. ಆಸಕ್ತರು ಈ ಅವಕಾಶವನ್ನು ಸದುಪಯೋಗಪಡಿಸಿಕೊಳ್ಳಬಹುದು ಎಂದು ಜಿಲ್ಲಾ ಯುವ ಅಧಿಕಾರಿ ಉಲ್ಲಾಸ್ ಕೆ ಟಿ ಪ್ರಕಟಣೆ ನೀಡಿದ್ದಾರೆ.




