Published
5 months agoon
By
Akkare News
ಅಶೋಕ್ ರೈ ಶಾಸಕರಾಗಿ ಆಯ್ಕೆಯಾದ ಕೆಲವು ತಿಂಗಳ ಬಳಿಕ ಕಾರ್ತಿಕ್ ಫೇಸ್ ಬುಕ್ ನಲ್ಲಿ ಶಾಸಕರ ಬಗ್ಗೆ ಅಸಭ್ಯವಾದ ಪದಗಳನ್ನು ಬಳಸಿ ಸೋಶಿಯಲ್ ಮೀಡಿಯಾದಲ್ಲಿ ಹಾಕಿದ್ದರು. ಇದರ ವಿರುದ್ದ ಅಶೋಕ್ ರೈ ಅಭಿಮಾನಿಗಳು ಪೊಲೀಸರಿಗೆ ದೂರು ನೀಡಿದ್ದರು. ಇದೀಗ ಪ್ರಕರಣದ. ಬಗ್ಗೆ ಪೊಲೀಸ್ ತನಿಖೆ ಆರಂಭವಾಗುತ್ತಿದ್ದಂತೆಯೇ ಭಯಭೀತರಾದ ಸರಕಾರಿ ನೌಕರ ಕಾರ್ತಿಕ್ ಶಾಸಕರಲ್ಲಿ ಬಂದು ನಾನು ತಪ್ಪು ಮಾಡಿದೆ ,ನನ್ನನ್ನು ಕ್ಷಮಿಸಿ ಸರ್ ಎಂದು ಅಂಗಲಾಚಿಕೊಂಡರು. ನೀವು ಕ್ಷಮಿಸದೆ ಇದ್ದಲ್ಲಿ ನನಗೆ ತೊಂದರೆಯಾಗಲಿದ್ದು, ನನ್ನ ನೌಕರಿಗೂ ಕುತ್ತು ಬರಲಿದೆ ಎಂದು ಕೇಳಿಕೊಂಡರು.