Connect with us

ಇತರ

ಪುತ್ತೂರು ಬಂಟರ ಸಂಘಕ್ಕೆ 5.5 ಎಕ್ರೆ ಜಾಗ ಮಂಜೂರು. ಬಂಟರ ಸಂಘದಿಂದ ಮುಖ್ಯಮಂತ್ರಿ ಸಿದ್ದರಾಮಯ್ಯಗೆ ಸನ್ಮಾನ

Published

on

ಪುತ್ತೂರು: ಪುತ್ತೂರು ಬಂಟರ ಸಂಘಕ್ಕೆ 5.5 ಎಕ್ತೆ ಜಾಗ ಮಂಜೂರುಗೊಳಿಸಿದ ಕರ್ನಾಟಕದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಅಶೋಕ ಜನಮನ ಕಾರ್ಯಕ್ರಮದಲ್ಲಿ ಬಂಟರ ಸಂಘದ ವತಿಯಿಂದ ಸನ್ಮಾನಿಸಿ ಗೌರವಿಸಲಾಯಿತು.

ಮುಖ್ಯಮಂತ್ರಿಗಳಿಗೆ ಅಭಿನಂದನೆ ಸಲ್ಲಿಸಿದ ಪುತ್ತೂರು ಬಂಟರ ಸಂಘದ ಅಧ್ಯಕ್ಷ ಕಾವು ಹೇಮನಾಥ ಶೆಟ್ಟಿಯವರು ಇಷ್ಟು ವರ್ಷದಲ್ಲಿ ಬಂಟರ ಸಂಘಕ್ಕೆ ಒಂದಿಂಚು ಜಾಗವನ್ನು ಯಾರೂ ನೀಡಿರಲಿಲ್ಲ.‌ಶಾಸಕ ಅಶೋಕ ರೈ ಅವರ ಮುತುವರ್ಜಿಯಿಂದ ನಮ್ಮ ಸಂಘಕ್ಕೆ 5.5 ಎಕ್ರೆ ಜಾಗವನ್ನು ನೀವು ಮಂಜೂರಾತಿ ನೀಡಿದ್ದೀರಿ. ಇದಕ್ಕಾಗಿ ಬಂಟರ ಸಂಘ ಎಂದೆಂದೂ‌ಚಿರ ಋಣಿಯಾಗಿರುತ್ತದೆ. ಸಂಘದ ವತಿಯಿಂದ ಮಾಡುವ ಸನ್ಮಾನವನ್ನು ಸ್ವೀಕರಿಸಬೇಕೆಂದು ಮುಖ್ಯಮಂತ್ರಿಗಳ ಬಳಿ ಕೇಳಿಕೊಂಡರು.

ಬಂಟರ ಸಂಘದ ವತಿಯಿಂದ ನೀಡಿದ ಸನ್ಮಾನವನ್ನು ಮುಖ್ಯಮಂತ್ರಿಗಳು ಸ್ವೀಕರಿಸಿ‌ದನ್ಯವಾದ ಸಲ್ಲಿಸಿದರು. ಈ ಸಂದರ್ಭದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಪುತ್ತೂರು ಶಾಸಕ ಅಶೋಕ್ ರೈ, ಮಾಜಿ ಸಚಿವರುಗಳಾದ ರಮಾನಾಥ ರೈ, ಜಿಪಂ ಮಾಜಿ ಸದಸ್ಯೆ ಅನಿತಾ ಹೇಮನಾಥ ಶೆಟ್ಟಿ ,ಸುಮಾ ಅಶೋಕ್ ರೈ,ಗ್ಯಾರಂಟಿ ಸಮಿತಿ ಅಧ್ಯಕ್ಷ‌ಉಮಾನಾಥ‌ಶೆಟ್ಟಿ ಪೆರ್ನೆ ಮತ್ತಿತರರು ಉಪಸ್ಥಿತರಿದ್ದರು.

Continue Reading
Click to comment

Leave a Reply

Your email address will not be published. Required fields are marked *

Advertisement