Connect with us

ಇತರ

ಶಬರಿಮಲೆ ಆಯ್ತು, ಗುರುವಾಯೂರ್ ದೇವಸ್ಥಾನದಲ್ಲೂ ಚಿನ್ನದ ಕಳ್ಳತನ ಬೆಳಕಿಗೆ

Published

on

ಕೇರಳದ ಶಬರಿಮಲೆ ದೇವಸ್ಥಾನದಲ್ಲಿ ಚಿನ್ನ ಕಳುವಾಗಿರುವ ಘಟನೆ ಬೆನ್ನಲ್ಲೇ ಗುರುವಾಯೂರ್​ನಲ್ಲೂ ನಡೆದಿರುವುದು ಬೆಳಕಿಗೆ ಬಂದಿದೆ. 18 ದೇವಸ್ಥಾನಗಳನ್ನು ನಿರ್ವಹಿಸುವ ಗುರುವಾಯೂರ್ ದೇವಸ್ವಾಮ್ ಮಂಡಳಿಯ ಆಡಿಟಿಂಗ್ ವೇಳೆ ಇದು ಬೆಳಕಿಗೆ ಬಂದಿದೆ. ಚಿನ್ನ, ಬೆಳ್ಳಿ, ದಂತ ಇತ್ಯಾದಿ ಬೆಲೆ ಬಾಳುವ ವಸ್ತುಗಳ ಲೆಕ್ಕ ಸಿಕ್ಕಿಲ್ಲ ಎನ್ನಲಾಗಿದೆ.


ತಿರುವನಂತಪುರಂ, : ಶಬರಿಮಲೆ ದೇವಸ್ಥಾನದಲ್ಲಿ ಚಿನ್ನ ಕಳುವಾಗಿರುವ ಘಟನೆ ಹಿಂದೂ ಧಾರ್ಮಿಕ ಭಕ್ತರಿಗೆ ಆಘಾತ ಕೊಟ್ಟ ಘಟನೆ ಮಾಸುವ ಮುನ್ನವೇ ಕೇರಳದ ಮತ್ತೊಂದು ದೇವಸ್ಥಾನದಲ್ಲಿ ಅಂತಹುದ್ದೇ ಪ್ರಕರಣ ನಡೆದಿರುವುದು ಬೆಳಕಿಗೆ ಬಂದಿದೆ. ಬಹಳ ಜನಪ್ರಿಯವಾದ ಗುರುವಾಯೂರ್ ದೇವಸ್ಥಾನಗಳಲ್ಲಿ (Guruvayur temple) ಬೆಲೆಬಾಳುವ ಆಭರಣಗಳು ನಾಪತ್ತೆಯಾಗಿರುವ ಘಟನೆ ವರದಿಯಾಗಿದೆ.

ಕೇರಳದಲ್ಲಿ 12 ದೇವಸ್ಥಾನಗಳ ಆಡಳಿತ ನಿಭಾಯಿಸುವ ಗುರುವಾಯೂರ್ ದೇವಸ್ವಾಮ್ ಮಂಡಳಿಯ ಆಡಿಟಿಂಗ್ ವೇಳೆ ಸಾಕಷ್ಟು ವ್ಯತ್ಯಯಗಳು ಪತ್ತೆಯಾಗಿವೆ. 2019ರಲ್ಲಿ ಮಾಡಲಾದ ಆಡಿಟಿಂಗ್​ನಲ್ಲಿ ಕೆಲ ಗಮನಾರ್ಹ ಸಂಗತಿಗಳು ಬೆಳಕಿಗೆ ಬಂದಿವೆ. ಚಿನ್ನ, ಬೆಳ್ಳಿ, ದಂತ ಇತ್ಯಾದಿ ಹಲವು ವಸ್ತುಗಳು ಕಾಣೆಯಾಗಿರುವುದು ಗೊತ್ತಾಗಿದೆ. ಗೋಲ್ಡ್ ಸ್ಕೀಮ್​ನಲ್ಲಿ ಇರಲಾಗಿದ್ದ ಠೇವಣಿಗಳಿಂದ 79 ಲಕ್ಷ ರೂ ನಷ್ಟವಾಗಿರುವುದನ್ನು ತೋರಿಸಲಾಗಿದೆ.

2019-20 ಮತ್ತು 2020-21ರ ಅವಧಿಯಲ್ಲಿ ಗುರುವಾಯೂರ್ ದೇವಸ್ವಾಮ್​ನ ಆಡಿಟಿಂಗ್ ಅನ್ನು ಸರ್ಕಾರದಿಂದ ನಡೆಸಲಾಗಿತ್ತು. ಅದರ ವರದಿಯು ಈಗ ಬೆಳಕಿಗೆ ಬಂದಿದೆ. ಆದಾಯ ಮತ್ತು ವೆಚ್ಚದ ಲೆಕ್ಕದಲ್ಲಿ ವ್ಯತ್ಯಾಸ ಗೊತ್ತಾಗಿದೆ. ಚಿನ್ನ, ಬೆಳ್ಳಿ ಇತ್ಯಾದಿ ಬೆಲೆಬಾಳುವ ವಸ್ತುಗಳ ಪರಿಶೀಲನೆಯನ್ನು ಸರಿಯಾಗಿ ನಡೆಸಲಾಗಿಲ್ಲ ಎಂಬುದು ಗೊತ್ತಾಗಿದೆ. ಒಟ್ಟಾರೆ 25 ಕೋಟಿ ರೂ ಮೊತ್ತದ ವಸ್ತುಗಳಿಗೆ ಲೆಕ್ಕ ಸಿಕ್ಕಿಲ್ಲ ಎನ್ನಲಾಗಿದೆ.

ಕೇರಳ ಸರ್ಕಾರದ ವಿರುದ್ಧ ಟೀಕೆ

ಗುರುವಾಯೂರ್ ದೇವಸ್ಥಾನದಲ್ಲಿ ಚಿನ್ನ ನಾಪತ್ತೆಯಾಗಿರುವುದು ಹಾಗೂ ಆಡಳಿತ ನಿರ್ವಹಣೆ ಸರಿಯಾಗಿ ಆಗದೇ ಇರುವುದು ಸೋಷಿಯಲ್ ಮೀಡಿಯಾದಲ್ಲಿ ಕೆಲವರಿಂದ ಆಕ್ರೋಶಕ್ಕೆ ಎಡೆ ಮಾಡಿಕೊಟ್ಟಿದೆ. ಕೇರಳದ ಎಡಪಂಥೀಯ ಸರ್ಕಾರ ಉದ್ದೇಶಪೂರ್ವಕವಾಗಿ ಹಿಂದೂ ದೇವಸ್ಥಾನಗಳನ್ನು ನಿರ್ಲಕ್ಷಿಸುತ್ತಿವೆ ಎಂದು ಪ್ರದೀಪ್ ಭಂಡಾರಿ ಎನ್ನುವವರು ಎಕ್ಸ್ ಪೋಸ್ಟ್​ನಲ್ಲಿ ತಿಳಿಸಿದ್ದಾರೆ.

Continue Reading
Click to comment

Leave a Reply

Your email address will not be published. Required fields are marked *

Advertisement
Exit mobile version