Connect with us

ಇತರ

ಕರ್ನಾಕಟದ ಶಬರಿಮಲೆ ಯಾತ್ರಿಕರಿಗೆ ಅಗತ್ಯ ಸಹಕಾರ ನೀಡಿ: ಕೇರಳ ಪತ್ರ ಬರೆದ ಶಾಲಿನಿ ರಜನೀಶ್

Published

on

ಬೆಂಗಳೂರು, ನವೆಂಬರ್ 20: ಶಬರಿಮಲೆ ಯಾತ್ರೆ ಕೈಗೊಳ್ಳುವ ರಾಜ್ಯದ ಯಾತ್ರಿಕರಿಗೆ ಅಗತ್ಯ ಸೌಲಭ್ಯ ಹಾಗೂ ಸುರಕ್ಷತೆಯನ್ನು ನೀಡಲು ಕೋರಿ ಕೇರಳದ ಮುಖ್ಯಕಾರ್ಯದರ್ಶಿಗಳಾದ ಡಾ.ಎ.ಜಯತಿಲಕ್ ಅವರಿಗೆ ರಾಜ್ಯದ ಮುಖ್ಯ ಕಾರ್ಯದರ್ಶಿ ಡಾ.ಶಾಲಿನಿ ರಜನೀಶ್ ಅವರು ಪತ್ರ ಬರೆದಿದ್ದಾರೆ.

ಕರ್ನಾಟಕ ರಾಜ್ಯದಿಂದ ಪ್ರತಿ ವರ್ಷ ಶಬರಿಮಲೆಗೆ ಹೆಚ್ಚಿನ ಸಂಖ್ಯೆಯಲ್ಲಿ ಯಾತ್ರಾರ್ಥಿಗಳು ಶ್ರೀ ಅಯ್ಯಪ್ಪಸ್ವಾಮಿ ದರ್ಶನಕ್ಕೆ ಯಾತ್ರೆಯನ್ನು ಕೈಗೊಳ್ಳುತ್ತಿದ್ದಾರೆ. ಈ ಸಂದರ್ಭದಲ್ಲಿ, ವಿಶೇಷವಾಗಿ ನವೆಂಬರ್ ನಿಂದ ಜನವರಿ ತಿಂಗಳಿನಲ್ಲಿ ಶಬರಿಮಲೆಗೆ ವಾರ್ಷಿಕ ತೀರ್ಥಯಾತ್ರೆ ಕೈಗೊಳ್ಳುವ ಕರ್ನಾಟಕ ರಾಜ್ಯದ ಹೆಚ್ಚಿನ ಸಂಖ್ಯೆಯ ಭಕ್ತರ ಸುಗಮ ಸೌಲಭ್ಯ ಮತ್ತು ಸುರಕ್ಷತೆಯನ್ನು ಖಚಿತಪಡಿಸಿಕೊಳ್ಳಲು ಕೇರಳ ಸರ್ಕಾರದ ಅಗತ್ಯ ಸಹಕಾರವನ್ನು ನೀಡುವಂತೆ ಮನವಿ ಮಾಡಿದ್ದಾರೆ.

ಮುಖ್ಯ ಕಾರ್ಯದರ್ಶಿ ಡಾ.ಶಾಲಿನಿ ರಜನೀಶ್ ಅವರು ತಮ್ಮ ಪತ್ರದಲ್ಲಿ, ಕರ್ನಾಟಕದ ಯಾತ್ರಿಕರು ಹೆಚ್ಚಾಗಿ ಬಳಸುವ ಪ್ರವೇಶ ಮಾರ್ಗಗಳಲ್ಲಿ, ವಿಶೇಷವಾಗಿ ಮಹತ್ವದ ದಿನಗಳಲ್ಲಿ ಹೆಚ್ಚಿನ ಜನಸಂದಣಿ ಇರುವ ಪ್ರದೇಶಗಳಲ್ಲಿ ಸೂಕ್ತ ಸಾರಿಗೆ ವ್ಯವಸ್ಥೆ ಮಾಡುವುದು. ಅಗತ್ಯ ವೈದ್ಯಕೀಯ ನೆರವು, ತುರ್ತು ಪ್ರತಿಕ್ರಿಯೆ ಸೇವೆಗಳು ಮತ್ತು ಪ್ರಮುಖ ಸಾರಿಗೆ ಕೇಂದ್ರಗಳಲ್ಲಿ ಆರೋಗ್ಯ ಅಧಿಕಾರಿಗಳೊಂದಿಗೆ ಸಮನ್ವಯ ನಡೆಸುವುದು. ಯಾತ್ರಿಕರ ಯೋಗಕ್ಷೇಮವನ್ನು ಖಚಿತಪಡಿಸಿಕೊಳ್ಳಲು ಸಾಕಷ್ಟು ಪೊಲೀಸ್ ಮತ್ತು ಸುರಕ್ಷತಾ ಕ್ರಮಗಳನ್ನು ವಿಶೇಷವಾಗಿ ಸೂಕ್ಷ್ಮ ಅಥವಾ ಹೆಚ್ಚಿನ ಸಾಂದ್ರತೆಯ ಸ್ಥಳಗಳಲ್ಲಿ ವ್ಯವಸ್ಥೆ ಮಾಡುವುದು.

ಯಾತ್ರಿಕರಿಗೆ ಸೌಲಭ್ಯಗಳು ಮತ್ತು ಕಾರ್ಯವಿಧಾನಗಳನ್ನು ಸಮನ್ವಯ ಮತ್ತು ಸಹಾಯ ಮಾಡಲು ಕನ್ನಡ ಭಾಷೆ ಸೇರಿದಂತೆ ಬಹುಭಾಷೆಗಳ ಸಂವಹನ ಹೊಂದಿರುವ ಸಹಾಯ ಕೇಂದ್ರಗಳು ಅಥವಾ ಮಾಹಿತಿ ಕೇಂದ್ರಗಳ ಸ್ಥಾಪನೆ ಮಾಡುವುದು. ತುರ್ತು ಪರಿಸ್ಥಿತಿ ಅಥವಾ ವಿಶೇಷ ಅವಶ್ಯಕತೆಗಳ ಸಂದರ್ಭದಲ್ಲಿ ಕರ್ನಾಟಕದ ಅಧಿಕಾರಿಗಳೊಂದಿಗೆ ಸಮನ್ವಯವನ್ನು ಸಾಧಿಸಲು ಕೇರಳದಲ್ಲಿ ಸಂಪರ್ಕ ಕೇಂದ್ರವನ್ನು ಸ್ಥಾಪಿಸುವುದು.

Continue Reading
Click to comment

Leave a Reply

Your email address will not be published. Required fields are marked *

Advertisement
Exit mobile version