Published
3 months agoon
By
Akkare News
ಹುಬ್ಬಳ್ಳಿ: ಧಾರವಾಡ ಜಿಲ್ಲೆಯ ಅಣ್ಣಿಗೇರಿ ಬಳಿಯಲ್ಲಿ ಭೀಕರ ರಸ್ತೆ ಅಪಘಾತ ಸಂಭವಿಸಿದ ಪರಿಣಾಮ ಇನ್ಸ್ಪೆಕ್ಟರ್ ಒಬ್ಬರು ಸ್ಥಳದಲ್ಲೇ ಸಾವನಪ್ಪಿದ ಘಟನೆ ಈಗಷ್ಟೇ ನಡೆದಿದೆ.
ಇನ್ಸ್ಪೆಕ್ಟರ್ ಪಂಚಾಕ್ಷರಿ ಅವರು ಅಪಘಾತದಲ್ಲಿ ಮೃತಪಟ್ಟಿದ್ದು ಬೈಲಹೊಂಗಲ, ಗದಗ ಹಾಗೂ ಹುಬ್ಬಳ್ಳಿ ಸೇರಿದಂತೆ ವಿವಿಧ ಕಡೆಗಳಲ್ಲಿ ಪಂಚಾಕ್ಷರಿಯವರು ಕಾರ್ಯವನ್ನು ನಿರ್ವಹಿಸಿದ್ದರು.
ಘಟನೆಯ ಮಾಹಿತಿ ತಿಳಿಯುತ್ತಿದ್ದ ಹಾಗೆ ಘಟನಾ ಸ್ಥಳಕ್ಕೆ ಅಣ್ಣಿಗೇರಿ ಠಾಣೆಯ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.