Published
3 months agoon
By
Akkare News
ಪಾನಿಪುರಿ ವ್ಯಾಪಾರ ಮಾಡುತ್ತಿದ್ದ ಮಹೇಶ್, ಕ್ಷುಲ್ಲಕ ಕಾರಣಕ್ಕೆ ಪತ್ನಿ ನಾಗರತ್ನ ಕೊಲೆಗೆ 5 ಲಕ್ಷ ರೂ. ಸುಪಾರಿ ನೀಡಿದ್ದ. ಗಂಡನ ಸಂಪಾದನೆಯನ್ನು ಬಡ್ಡಿಗೆ ಬಿಡುತ್ತಿದ್ದ ಪತ್ನಿ, ಮಹೇಶ್ಗೆ ಹಣ ನೀಡುತ್ತಿರಲಿಲ್ಲ. ಇದರಿಂದ ಅಸಮಾಧಾನಗೊಂಡ ಮಹೇಶ್, ತನಗೆ ಕಿಂಚಿತ್ತೂ ಮರ್ಯಾದೆ ಕೊಡದ ಪತ್ನಿ ಕೊಲೆಗೆ ಸ್ಕೆಚ್ ಹಾಕಿದ್ದ. ಮನೆಗೆ ನುಗ್ಗಿ ಗ್ಯಾಸ್ ಪೈಪ್ ಕತ್ತರಿಸಿ ಪೆಟ್ರೋಲ್ ಸುರಿದು ಹೆಂಡತಿಯನ್ನು ಮುಗಿಸಿ ಎಂದು ಪ್ಲಾನ್ ರೂಪಿಸಿದ್ದ.
ಕ್ಷುಲ್ಲಕ ಕಾರಣಕ್ಕೆ ವೈದ್ಯರ ಮೇಲೆ ಹಲ್ಲೆ ನಡೆಸಿದ ಘಟನೆ ಮೈಸೂರಿನ ಸಾತಗಳ್ಳಿ ಬಡಾವಣೆಯಲ್ಲಿ ನಡೆದಿದೆ. ಶಿಶು ಆಸ್ಪತ್ರೆಯ ವೈದ್ಯ ಡಾ. ಅನೂಪ್ ಮೇಲೆ ರುಬಿಯಾಜ್ ಷರೀಫ್ ಹಾಗೂ ಆತನ ತಂದೆ ಹಲ್ಲೆ ನಡೆಸಿರುವ ಆರೋಪ ಕೇಳಿಬಂದಿದೆ. ಮೂರು ವರ್ಷದ ಮಗುವನ್ನು ಆಸ್ಪತ್ರೆಗೆ ದಾಖಲಾದ ಮಗುವನ್ನು ನೋಡಲು ಬಂದಿದ್ದ ರುಬಿಯಾಜ್ ಷರೀಫ್, ಚಪ್ಪಲಿ ಧರಿಸಿಕೊಂಡೇ ಕ್ಲಿನಿಕ್ ಒಳಗೆ ಪ್ರವೇಶಿಸಿದ್ದನು. ಚಪ್ಪಲಿ ಹೊರಗೆ ಬಿಡುವಂತೆ ವೈದ್ಯರು ಮನವಿ ಮಾಡಿದಾಗ ಮಾತಿನ ಚಕಮಕಿ ನಡೆದಿದ್ದು, ಬಳಿಕ ತಾನೂ ಚಪ್ಪಲಿ ಹೊರಗೆ ಬಿಟ್ಟಿದ್ದನ್ನು ತೋರಿಸಲು ವೈದ್ಯರು ಹೊರಗೆ ಬಂದ ಸಮಯದಲ್ಲಿ ಏಕಾಏಕಿ ಹಲ್ಲೆ ನಡೆಸಲಾಗಿದೆ. ಈ ದೃಶ್ಯ ಸಿಸಿ ಕ್ಯಾಮೆರಾದಲ್ಲಿ ಸೆರೆಯಾಗಿದ್ದು, ಉದಯಗಿರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಆದರೆ ಎಫ್ಐಆರ್ ದಾಖಲಾಗಿದ್ದರೂ ಆರೋಪಿಗಳನ್ನು ಇನ್ನೂ ಬಂಧಿಸಿಲ್ಲ ಎನ್ನಲಾಗಿದೆ.