ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಅಶಾಂತಿಯಿಂದ ಕಾನೂನು ಸುವ್ಯವಸ್ಥೆ ಹದಗೆಟ್ಟಿದ್ದಾಗ ರಾಜ್ಯ ಸರ್ಕಾರ ಇಬ್ಬರು ದಕ್ಷ ಪೊಲೀಸ್ ಅಧಿಕಾರಿಗಳನ್ನು ನೇಮಿಸಿದ ಕಾರಣ ಜಿಲ್ಲೆಯಲ್ಲಿ ಶಾಂತಿ- ಸೌಹಾರ್ದತೆ ಮರುಸ್ಥಾಪನೆಗೆ ಕಾರಣವಾಗಿದೆ. ಇಂತಹ ಅಧಿಕಾರಿಗಳನ್ನು ಯಾವುದೇ ಕಾರಣಕ್ಕೂ ರಾಜ್ಯ ಸರ್ಕಾರ ವರ್ಗಾವಣೆ ಮಾಡಲ್ಲ. ಆದರೆ ಬಿಜೆಪಿಯವರು ಕೆಲವೊಂದು ಧಾರ್ಮಿಕ ವಿಚಾರಗಳನ್ನು ಮುಂದಿಟ್ಟು ಅವರ ವರ್ಗಾವಣೆ ಕುರಿತಂತೆ ಗೊಂದಲ ಸೃಷ್ಟಿ ಮಾಡುತ್ತಿದ್ದಾರೆ.
ಒಂದು ವೇಳೆ ವರ್ಗಾವಣೆ ಹುನ್ನಾರ ಮಾಡುತ್ತಿದ್ದರೆ, ಅದು ಬಿಜೆಪಿಯವರು ಮಾತ್ರ ಎಂದರು ಕಾಂಗ್ರೆಸ್ ಮುಖಂಡ ಪದ್ಮರಾಜ್ ಪತ್ರಿಕಾಗೋಷ್ಠಿಯಲ್ಲಿ ಹೇಳಿಕೆಯನ್ನ ನೀಡಿದರು.