Published
2 months agoon
By
Akkare News


ಕಡೂರು-ಚಿಕ್ಕಮಗಳೂರು-ಬೇಲೂರು ಹೊಸ ರೈಲು ಮಾರ್ಗವು ಒಟ್ಟು 68 ಕಿಲೋ ಮೀಟರ್ನ ಯೋಜನೆಯಾಗಿದೆ. ಇದರಲ್ಲಿ ಈಗಾಗಲೇ 56 ಕಿಲೋ ಮೀಟರ್ ಮಾರ್ಗದಲ್ಲಿ ರೈಲುಗಳು ಸಂಚಾರ ಕಾರ್ಯಾರಂಭಗೊಂಡಿದೆ. ಈ ಮೂಲಕ ಚಿಕ್ಕಮಗಳೂರಿನಂತಹ ದುರ್ಗಮ ಪ್ರದೇಶದಲ್ಲಿ ರೈಲು ಸೇವೆ ಲಭಿಸಿದಂತಾಗಿದೆ. ಈ ಭಾಗದ ಪ್ರಯಾಣಿಕರ ಬಹುದಿನಗಳ ಕನಸು ನನಸಾಗಿದೆ.

ಬಾಕಿ ಉಳಿದ ಕಾಮಗಾರಿಯ ಕೆಲಸ ಚುರುಕು ರೈಲ್ವೆ ಸಚಿವಾಲಯದ ಪ್ರಕಾರ, ಈ ಮಾರ್ಗದಲ್ಲಿ ಬಾಕಿ ಉಳಿದ ಕಾಮಗಾರಿಯಲ್ಲಿ ಹಳಿ ಹಾಕುವ ಕೆಲಸ ಪ್ರಗತಿಯಲ್ಲಿದೆ. ನಿರಂತರವಾಗಿ ಕೆಲಸ ನಡೆಯುತ್ತಿದ್ದು, ಸೇತುವೆ ನಿರ್ಮಾಣ ಕಾರ್ಯ ಮುಗಿದಿದೆ. ಭಾರತದ ಗ್ರಾಮೀಣ ಭಾಗ ಹಾಗೂ ದುರ್ಗಮ ಪ್ರದೇಶಗಳಲ್ಲಿ ರೈಲು ಜಾಲ ಮಾರ್ಗ ತಲೆ ಎತ್ತಿವೆ. ಇದರಿಂದ ಈವರೆಗೆ ಇದ್ದ ರೈಲು ಸಾರಿಗೆ ಸಮಸ್ಯೆ ಬಗೆಹರಿಯುತ್ತಾ ಬಂದಿದ್ದು, ಆಯಾ ಭಾಗದ ಜನರ ರೈಲಿಗೆ ಸಾರಿಗೆ ಬೇಡಿಕೆಗಳು ಈಡೇರಿಕೆ ಆಗುತ್ತಿವೆ.

ಹೊಸ ಮಾರ್ಗದ ಪ್ರಯೋಜನಗಳು ಇದು ಚಿಕ್ಕಮಗಳೂರಿನ ಬೆಟ್ಟದ ಕಾಫಿ ಬೆಳೆಯುವ ಒಳಾಂಗಣದ ಪ್ರದೇಶಗಳಿಗೂ ಸೇವೆ ಲಭ್ಯವಾಗುತ್ತದೆ. ಯುನೆಸ್ಕೋ ತಾಣವಾದ ಹಾಸನದ ಬೇಲೂರಿನ ಪ್ರಾಚೀನ ಹೊಯ್ಸಳ ದೇವಾಲಯಗಳಿಗೆ ಸುಧಾರಿತ ಸಂಪರ್ಕ ಸಾಧ್ಯವಾಗುತ್ತದೆ. ಪ್ರವಾಸೋದ್ಯಮ, ಕೈಗಾರಿಕೆಗೆ ಉತ್ತೇಜನ ಜೊತೆಗೆ ಮುಖ್ಯವಾಗಿ ರೈಲು ಸಾರಿಗೆ ವ್ಯವಸ್ಥೆ ಸುಧಾರಣೆ ಆಗಿದೆ. ಕರ್ನಾಟಕದಲ್ಲಿ ಪ್ರಾದೇಶಿಕ ಪ್ರವಾಸೋದ್ಯಮ ಮತ್ತು ಆರ್ಥಿಕತೆಯನ್ನು ಹೆಚ್ಚಿಸಲು ರೈಲು ಯೋಜನೆಯು ಪ್ರಮುಖ ಪಾತ್ರವಹಿಸಲಿದೆ. ಚಿಕ್ಕಮಗಳೂರು ಹಾಗೂ ಬೇಲೂರಿನಲ್ಲಿ ಸ್ಥಳೀಯ ಆರ್ಥಿಕತೆಗೆ ದೊಡ್ಡ ಉತ್ತೇಜನ ಸಿಕ್ಕಂತಾಗಿದೆ. ಒಟ್ಟಾರೆ ಈ ಯೋಜನೆಯು ನೈಋತ್ಯ ರೈಲ್ವೆ ವ್ಯಾಪ್ತಿಯ ಕರ್ನಾಟಕದ ರೈಲ್ವೆ ಜಾಲ ವಿಸ್ತರಣೆಗೆ ಕೊಡುಗೆ ನೀಡಿದೆ.







