Connect with us

ಇತರ

ವಿಮಾನ ಅಪಘಾತದಲ್ಲಿ ಅಜಿತ್ ಪವಾರ್ ಸಾವು : ಪಿತೂರಿ ಶಂಕೆ ವ್ಯಕ್ತಪಡಿಸಿದ ಮಮತಾ ಬ್ಯಾನರ್ಜಿ, ಉನ್ನತ ಮಟ್ಟದ ತನಿಖೆಗೆ ಒತ್ತಾಯಿಸಿದ ರಾಜಕೀಯ ನಾಯಕರು

Published

on

ಮಹಾರಾಷ್ಟ್ರ ಉಪಮುಖ್ಯಮಂತ್ರಿ ಅಜಿತ್ ಪವಾರ್ ಅವರ ಸಾವಿಗೆ ಕಾರಣವಾದ ಬಾರಾಮತಿ ವಿಮಾನ ಪತನದ ಕುರಿತು ಸುಪ್ರೀಂ ಕೋರ್ಟ್ ಮೇಲ್ವಿಚಾರಣೆಯಲ್ಲಿ ತನಿಖೆ ನಡೆಸಬೇಕೆಂದು ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಬುಧವಾರ (ಜ.28) ಒತ್ತಾಯಿಸಿದ್ದಾರೆ. ದುರಂತದ ಹಿಂದೆ ಪಿತೂರಿಯ ಶಂಕೆ ವ್ಯಕ್ತಪಡಿಸಿರುವ ಅವರು, ದೇಶದ ರಾಜಕೀಯ ನಾಯಕರ ಸುರಕ್ಷತೆಯ ಕುರಿತು ಪ್ರಶ್ನೆ ಎತ್ತಿದ್ದಾರೆ.

ಅವಘಡದ ಕುರಿತು ಮಾಧ್ಯಮಗಳೊಂದಿಗೆ ಮಾತನಾಡಿದ ಮಮತಾ ಬ್ಯಾನರ್ಜಿ, ಅಜಿತ್ ಪವಾರ್ ಅವರ ಸಾವಿನ ಸುದ್ದಿ ನನಗೆ ಆಘಾತ ತಂದಿದೆ. ಈ ಘಟನೆ ರಾಷ್ಟ್ರಕ್ಕೆ ಗಂಭೀರ ನಷ್ಟ ಎಂದಿದ್ದಾರೆ. ದೇಶದಲ್ಲಿ ರಾಜಕೀಯ ನಾಯಕರಿಗೂ ‘ಸುರಕ್ಷತೆ ಮತ್ತು ಭದ್ರತೆ ಇಲ್ಲ ಎಂದಿರುವ ಅವರು, ಅಜಿತ್ ಪವಾರ್ ಬಿಜೆಪಿ ತೊರೆಯುವ ಬಗ್ಗೆ ಯೋಚಿಸುತ್ತಿದ್ದಾರೆ ಎಂದು ಸೂಚಿಸುವ ಸಾಮಾಜಿಕ ಮಾಧ್ಯಮಗಳ ಇತ್ತೀಚಿನ ಹೇಳಿಕೆಗಳನ್ನು ಉಲ್ಲೇಖಿಸಿದ್ದಾರೆ.

ಇಂದು ನಡೆದ ಘಟನೆ ಗಂಭೀರ ಪ್ರಶ್ನೆಗಳನ್ನು ಹುಟ್ಟುಹಾಕುತ್ತದೆ. ಸುಪ್ರೀಂ ಕೋರ್ಟ್ ಮೇಲ್ವಿಚಾರಣೆಯ ತನಿಖೆ ಮಾತ್ರ ವಿಶ್ವಾಸಾರ್ಹವಾಗಿರುತ್ತದೆ. ನಮಗೆ ಸುಪ್ರೀಂ ಕೋರ್ಟ್‌ ಮೇಲೆ ಮಾತ್ರ ನಂಬಿಕೆ ಇದೆ, ಬೇರೆ ಯಾವುದೇ ಸಂಸ್ಥೆಗಳ ಮೇಲೆ ಇಲ್ಲ. ತನಿಖಾ ಸಂಸ್ಥೆಗಳು ತಮ್ಮ ಸ್ವಾತಂತ್ರ್ಯವನ್ನು ಕಳೆದುಕೊಂಡಿವೆ” ಎಂದು ಮಮತಾ ಬ್ಯಾನರ್ಜಿ ಹೇಳಿದ್ದಾರೆ.

ಅಜಿತ್ ಪವಾರ್ ಮತ್ತು ಇತರ ನಾಲ್ವರ ಸಾವಿಗೆ ಕಾರಣವಾಗಿರುವ ಬಾರಾಮತಿ ವಿಮಾನ ಅಪಘಾತದ ಬಗ್ಗೆ ಸರಿಯಾದ ಮತ್ತು ಸಮಗ್ರ ತನಿಖೆ ನಡೆಸಬೇಕೆಂದು ಹಲವಾರು ರಾಜಕೀಯ ನಾಯಕರು ಒತ್ತಾಯಿಸಿದ್ದಾರೆ. ಕಾಂಗ್ರೆಸ್ ಸಂಸದ ಗೌರವ್ ಗೊಗೊಯ್, ಆರ್‌ಜೆಡಿ ಮುಖ್ಯಸ್ಥ ಲಾಲು ಪ್ರಸಾದ್ ಯಾದವ್ ಮತ್ತು ವಂಚಿತ್ ಬಹುಜನ ಅಘಾಡಿ ನಾಯಕ ಪ್ರಕಾಶ್ ಅಂಬೇಡ್ಕರ್ ಸೇರಿದಂತೆ ಹಲವರು ಸಂತಾಪ ಸೂಚಿಸುತ್ತಾ ಘಟನೆಯ ಬಗ್ಗೆ ಪ್ರಶ್ನೆ ಎತ್ತಿದ್ದಾರೆ.

Continue Reading
Click to comment

Leave a Reply

Your email address will not be published. Required fields are marked *

Advertisement
Exit mobile version