Connect with us

ಇತರ

ಬೆಂಗಳೂರಿನಲ್ಲಿ 18 ಕೋಟಿ ರೂ. ಮೌಲ್ಯದ ಚಿನ್ನಾಭರಣ ದೋಚಿದ ನೇಪಾಳಿ ದಂಪತಿ!

Published

on

ಬೆಂಗಳೂರಿನಲ್ಲಿ 18 ಕೋಟಿ ರೂ. ಮೌಲ್ಯದ ಚಿನ್ನಾಭರಣ ಕಳ್ಳತನ ಪ್ರಕರಣ ಭಾರಿ ಸಂಚಲನ ಮೂಡಿಸಿದೆ. ಮನೆಕೆಲಸದ ಹೆಸರಿನಲ್ಲಿ ವಿಶ್ವಾಸ ಗಳಿಸಿ ಬಂಗಾರ ದೋಚಿದ ಆರೋಪಿಗಳು ನೇಪಾಳಿ ದಂಪತಿ ಎಂದು ಮಾರತ್ ಹಳ್ಳಿ ಪೊಲೀಸರ ತನಿಖೆಯಿಂದ ತಿಳಿದುಬಂದಿದೆ. ದೇಶದ ಹಲವೆಡೆ ಇದೇ ರೀತಿಯ ಕೃತ್ಯ ಎಸಗಿರುವ ಈ ಜೋಡಿಗಾಗಿ ವಿಶೇಷ ತಂಡಗಳು ಮುಂಬೈ, ಕೋಲ್ಕತ್ತಾ ಹಾಗೂ ನೇಪಾಳದಲ್ಲಿ ಶೋಧ ಕಾರ್ಯ ನಡೆಸುತ್ತಿವೆ. ಕಳ್ಳರನ್ನು ಹಿಡಿಯಲು ಬಲೆ ಬೀಸಲಾಗಿದೆ.

ಬೆಂಗಳೂರು, ಫೆಬ್ರುವರಿ 02: ಬೆಂಗಳೂರಿನಲ್ಲಿ  ಇತ್ತೀಚಿಗೆ ಬರೋಬ್ಬರಿ 18 ಕೋಟಿ ರೂ. ಮೌಲ್ಯದ ಚಿನ್ನಾಭರಣ ಕಳ್ಳತನದ ಪ್ರಕರಣದಲ್ಲಿ ಮಾರತ್ ಹಳ್ಳಿ ಪೊಲೀಸರು ಚುರುಕಿನ ಕಾರ್ಯಾಚರಣೆ ನಡೆಸುತ್ತಿದ್ದಾರೆ. ಮನೆಕೆಲಸದ ಹೆಸರಿನಲ್ಲಿ ವಿಶ್ವಾಸ ಗಳಿಸಿ ಸುಮಾರು ಬಂಗಾರ ದೋಚುತ್ತಿದ್ದ ಆರೋಪಿಗಳು ನೇಪಾಳಿ ದಂಪತಿ ಎಂಬುದು ತನಿಖೆಯಿಂದ ದೃಢಪಟ್ಟಿದ್ದು, ಕದೀಮರನ್ನು ಹಿಡಿಯಲು ಬಲೆ ಬೀಸಿದ್ದಾರೆ.

 

ಆರೋಪಿಗಳು ದಿನೇಶ್ ಹಾಗೂ ಕಮಲ ಅಥವಾ ಸಲೀನಾ ಎಂಬ ನಕಲಿ ಹೆಸರುಗಳನ್ನು ಬಳಸಿಕೊಂಡು ಮನೆಕೆಲಸಕ್ಕೆ ಸೇರಿ ಕಳ್ಳತನ ನಡೆಸುತ್ತಿದ್ದರೆಂದು ಪೊಲೀಸರು ತಿಳಿಸಿದ್ದಾರೆ. ಈ ದಂಪತಿ ದೇಶದ ಅನೇಕ ಭಾಗಗಳಲ್ಲಿ ಇದೇ ರೀತಿಯ ಕೃತ್ಯಗಳನ್ನು ನಡೆಸಿರುವ ಶಂಕೆ ವ್ಯಕ್ತವಾಗಿದೆ. 2025ರ ಅಕ್ಟೋಬರ್‌ನಲ್ಲಿ ಮಹಾರಾಷ್ಟ್ರದಲ್ಲಿ ನಿವೃತ್ತ ಸರ್ಕಾರಿ ಅಧಿಕಾರಿಯ ಮನೆಯಲ್ಲಿ 16 ಲಕ್ಷ ರೂ. ಮೌಲ್ಯದ ಚಿನ್ನಾಭರಣ ಕಳ್ಳತನ ಮಾಡಿದ್ದರೆಂದು ಕಾರ್ಯಾಚರಣೆ ವೇಳೆ ತಿಳಿದುಬಂದಿದೆ.

ಈ ಹಿಂದೆಯೂ ವಿವಿಧೆಡೆ ಕಳ್ಳತನ ಮಾಡಿದ್ದ ಜೋಡಿ

ಪುಣೆಯ ಭಾವ್ಧಾನ್ ಪ್ರದೇಶದ ವಿಂಡ್ಮಿಲ್ ಸೊಸೈಟಿಯ ರತ್ನಾದೀಪ್ ರಂಗನಾಥ್ ರಾವ್ ಅವರ ಮನೆಯಲ್ಲಿ ಕೆಲಸಕ್ಕೆ ಸೇರಿ ಸುಮಾರು ಆರು ತಿಂಗಳ ಬಳಿಕ, ಮನೆಯಲ್ಲಿ ಯಾರೂ ಇಲ್ಲದ ವೇಳೆ ಲಾಕರ್ ಒಡೆದು ಕಳ್ಳತನ ಮಾಡಿ ಆರೋಪಿಗಳು ಪರಾರಿಯಾಗಿದ್ದರು. ನಂತರ ದಿನೇಶ್ ಹಾಗೂ ಸಲೀನಾ ಎಂಬ ಹೆಸರಿನಲ್ಲಿ ಮನೆ ಕೆಲಸಕ್ಕೆ ಸೇರಿ ಬೆಂಗಳೂರಿನಲ್ಲಿ 18 ಕೋಟಿ ರೂ. ಮೌಲ್ಯದ ಚಿನ್ನಾಭರಣ ದೋಚಿದ್ದಾರೆಂದು ತಿಳಿದು ಬಂದಿದೆ.

ಈ ಪ್ರಕರಣದ ಬೆನ್ನತ್ತಿರುವ ಮಾರತ್ ಹಳ್ಳಿ ಪೊಲೀಸರು ಸುಮಾರು ಏಳು ವಿಶೇಷ ತಂಡಗಳನ್ನು ರಚಿಸಿ ಮುಂಬೈ, ಕೊಲ್ಕತ್ತಾ ಹಾಗೂ ನೇಪಾಳ ಸೇರಿ ಹಲವು ಕಡೆಗಳಲ್ಲಿ ಶೋಧ ಕಾರ್ಯ ನಡೆಸುತ್ತಿದ್ದಾರೆ. ಆರೋಪಿಗಳು ನೇಪಾಳಕ್ಕೆ ಪರಾರಿಯಾಗಿದ್ದರೆ ಅವರನ್ನು ಪತ್ತೆಹಚ್ಚುವುದು ಕಷ್ಟವಾಗಲಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಜೊತೆಗೆ ಸ್ಥಳೀಯವಾಗಿ ಯಾರಾದರೂ ಆರೋಪಿಗಳಿಗೆ ಸಹಾಯ ಮಾಡಿದ್ದಾರೆಯೇ ಎಂಬುದರ ಕುರಿತಾದ ತನಿಖೆಯೂ ಮುಂದುವರಿದಿದೆ ಎಂದು ತಿಳಿಸಲಾಗಿದೆ.

Continue Reading
Click to comment

Leave a Reply

Your email address will not be published. Required fields are marked *

Advertisement
Exit mobile version