Published
4 months agoon
By
Akkare News

ಈ ವೇಳೆ ಮಾತನಾಡಿದ ಶಾಸಕ ಅಶೋಕ್ ರೈ, ಪುತ್ತೂರಿನಲ್ಲಿ ಅತ್ಯಂತ ಎತ್ತರದಲ್ಲಿ ರಾಷ್ಟ್ರಧ್ವಜ ಹಾರಿಸಬೇಕು ಎಂಬುದು ನಮ್ಮ ಕನಸಾಗಿತ್ತು. ಪುತ್ತೂರಿ ನಲ್ಲಿ ದೇಶ ಪ್ರೇಮ ಏನು ಎಂಬುವುದನ್ನು ತೋರಿಸುತ್ತೇವೆ ಎಂದು 6 ತಿಂಗಳ ಹಿಂದೆಯೇ ಹೇಳಿದ್ದೆ. ಯಾವುದೇ ವಿಧಾನಸಭಾ ಕ್ಷೇತ್ರದಲ್ಲಿ ಇಷ್ಟು ಎತ್ತರದಲ್ಲಿ ರಾಷ್ಟ್ರ ಧ್ವಜ ಹಾರಿಸಿದ ಯಾವುದೇ ತಾಲ್ಲೂಕು ರಾಜ್ಯದಲ್ಲಿ ಇಲ್ಲ. ತಾಲ್ಲೂಕು ಮಟ್ಟದಲ್ಲಿ ರಾಜ್ಯದ ಅತ್ಯಂತ ಎತ್ತರದ 3ನೇ ರಾಷ್ಟ್ರಧ್ವಜ ಸ್ತಂಭ ಇರುವುದು ಪುತ್ತೂರಿನಲ್ಲಿ ಎಂದು ಹೇಳಲು ಇಚ್ಛಿಸುವೆ ಎಂದರು.

ವಾರದೊಳಗೆ ಲೈಟಿಂಗ್ ವ್ಯವಸ್ಥೆ ಮಾಡಿ ರಾಷ್ಟ್ರಧ್ವಜ ಹಾರಿಸುವ ಕೆಲಸ ಮಾಡಲಾಗುವುದು. 2400 ಚದರ ಅಡಿ ಅಗಲದ ರಾಷ್ಟ್ರಧ್ವಜ ಹಾರಾಡ ಲಿದೆ. ಒಂದು ಧ್ವಜಕ್ಕೆ ₹60 ಸಾವಿರ ವೆಚ್ಚವಿದ್ದು, ವರ್ಷಕ್ಕೆ 3 ಬಾರಿ ಧ್ವಜವನ್ನು ಬದಲಾಯಿಸಬೇಕಾಗುತ್ತದೆ. ಮೈಕಲ್ಲಿ ಭಾಷಣ ಮಾಡಿದ ಮಾತ್ರಕ್ಕೆ ದೇಶ ಪ್ರೇಮ ಬರುವುದಿಲ್ಲ. ಇಂತಹ ವ್ಯವಸ್ಥೆಗಳನ್ನು ಮಾಡಿದರೆ ಮಾತ್ರ ದೇಶ ಪ್ರೇಮ ಬೆಳೆಸಬಹುದಾಗಿದೆ ಎಂದರು





