Published
1 month agoon
By
Akkare News
ಪುತ್ತೂರು: ಕಾಂಗ್ರೆಸ್ ಭವನ ಟ್ರಸ್ಟ್(ರಿ.) ಪುತ್ತೂರು, ಕಾಂಗ್ರೆಸ್ ಕಛೇರಿಯ ಶಿಲಾನ್ಯಾಸ ಕಾರ್ಯಕ್ರಮವು ಪುತ್ತೂರು ಬಸ್ ನಿಲ್ದಾಣದ ಮುಂಭಾಗ ಫೆ.6 ಶುಕ್ರವಾರ ಸಂಜೆ 5.30ಕ್ಕೆ ನಡೆಯಲಿದೆ.
ಡಿ.ಕೆ. ಶಿವಕುಮಾರ್, ಉಪ ಮುಖ್ಯಮಂತ್ರಿಗಳು ಮತ್ತು ಅಧ್ಯಕ್ಷರು ಕೆ.ಪಿ.ಸಿ.ಸಿ, ಇವರು ಶಿಲಾನ್ಯಾಸ ನೆರವೇರಿಸಲಿದ್ದಾರೆ.


ಕಾರ್ಯಕ್ರಮದ ಅಧ್ಯಕ್ಷತೆಯನ್ನು ಪುತ್ತೂರು ವಿಧಾನ ಸಭಾ ಕ್ಷೇತ್ರ ಶಾಸಕರಾದ ಅಶೋಕ್ ಕುಮಾರ್ ರೈ ವಹಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ದಿನೇಶ್ ಗುಂಡೂರಾವ್, ಆರೋಗ್ಯ ಮತ್ತು ಜಿಲ್ಲಾ ಉಸ್ತುವಾರಿ ಸಚಿವರು, ದ.ಕ, ಜಿ.ಸಿ. ಚಂದ್ರಶೇಖರ್, ರಾಜ್ಯಸಭಾ ಸದಸ್ಯರು ಮತ್ತುಕಾರ್ಯಾಧ್ಯಕ್ಷರು ಕೆ.ಪಿ.ಸಿ.ಸಿ, ಮಂಜುನಾಥ ಭಂಡಾರಿ, ಶಾಸಕರು ಮತ್ತು ಕಾರ್ಯಾಧ್ಯಕ್ಷರು ಕೆ.ಪಿ.ಸಿ.ಸಿ, ಶ್ರೀ ಹರೀಶ್ ಕುಮಾರ್ ಅಧ್ಯಕ್ಷರು ಮೆಸ್ಕಾಂ ಮತ್ತು ಜಿಲ್ಲಾಧ್ಯಕ್ಷರು, ದ.ಕ. ಜಿಲ್ಲಾ ಕಾಂಗ್ರೆಸ್ ಸಮಿತಿ ಇವರು ಆಗಮಿಸಲಿದ್ದಾರೆ.

ಗೌರವ ಉಪಸ್ಥಿತಿ ಶ್ರೀ ಬಿ ರಮಾನಾಥ ರೈ ಮಾಜಿ ಸಚಿವರು ಕರ್ನಾಟಕ ಸರಕಾರ, ಶ್ರೀ ವಿನಯ ಕುಮಾರ್ ಸೊರಕೆ ಮಾಜಿ ಸಚಿವರು ಮತ್ತು ಪ್ರಚಾರ ಸಮಿತಿ ಅಧ್ಯಕ್ಷರು, ಕೆ.ಪಿ.ಸಿ.ಸಿ, ಶ್ರೀ ಐವನ್ ಡಿಸೋಜ ವಿಧಾನ ಪರಿಷತ್ ಸದಸ್ಯರು, ಕರ್ನಾಟಕ ಸರಕಾರ, ಶ್ರೀಮತಿ ಶಕುಂತಳಾ ಶೆಟ್ಟಿ ಮಾಜಿ ಶಾಸಕರು, ಪುತ್ತೂರು ವಿಧಾನಸಭಾ ಕ್ಷೇತ್ರ, ಶ್ರೀ ಇನಾಯತ್ ಆಲಿ ಪ್ರಧಾನ ಕಾರ್ಯದರ್ಶಿ, ಕೆ.ಪಿ.ಸಿ.ಸಿ






