Published
3 weeks agoon
By
Akkare News
ಕರ್ನಾಟಕ ರಾಜ್ಯ ಕೃಷಿ ಉತ್ಪನ್ನಗಳ ಸಂಸ್ಕರಣೆ ಹಾಗೂ ರಫ್ತು ನಿಗಮ ನಿಯಮಿತ(ಕೆಪೆಕ್) ಸಂಸ್ಥೆ, ಜಿಲ್ಲಾ ಪಂಚಾಯತ್, ಕೃಷಿ ಹಾಗೂ ತೋಟಗಾರಿಕೆ ಇಲಾಖೆ, ಚಿಕ್ಕಮಗಳೂರು ಇವರ ವತಿಯಿಂದ ಫೆ.17 ರ ಬೆಳಿಗ್ಗೆ 10 ರಿಂದ ಸಂಜೆ 5 ಗಂಟೆವರೆಗೆ ಚಿಕ್ಕಮಗಳೂರಿನ ಜಿ.ಪಂ ಸಭಾಂಗಣದಲ್ಲಿ ‘ಕಾಳು ಮೆಣಸು ಮತ್ತಿತರೆ ಸಂಬಾರು ಉತ್ಪನ್ನಗಳ ಸಂಸ್ಕರಣೆ, ಮೌಲ್ಯವರ್ಧನೆ ಹಾಗೂ ರಫ್ತು’ ಕುರಿತು ಒಂದು ದಿನದ ತರಬೇತಿ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ.


ತರಬೇತಿಯಲ್ಲಿ ಸಂಬಾರು ಬೆಳೆಗಳ ವಿವಿಧ ವಿಷಯ ತಜ್ಞರು ಸಂಪನ್ಮೂಲ ವ್ಯಕ್ತಿಗಳಾಗಿ ಪಾಲ್ಗೊಂಡು ತರಬೇತಿ ನೀಡುವರು. ಸಂಬಾರು ಬೆಳೆಗಾರರು, ರೈತ ಉತ್ಪಾದಕ ಸಂಸ್ಥೆಗಳು, ಸಂಬಾರು ಉತ್ಪನ್ನಗಳ ಉದ್ದಿಮೆದಾರರಿಗೆ ಈ ತರಬೇತಿ ಕಾರ್ಯಕ್ರಮವು ಉಪಯುಕ್ತವಾಗಿದ್ದು, ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳುವಂತೆ ಕೆಪೆಕ್ ವ್ಯವಸ್ಥಾಪಕ ನಿರ್ದೇಶಕರು ತಿಳಿಸಿದ್ದಾರೆ.










