Connect with us

ಇತರ

ನಕ್ಸಲ್ ಕರಪತ್ರ ಹಚ್ಚಿದ್ದ ಪ್ರಕರಣ; ವಾಟೆಂಡ್ ನಕ್ಸಲ್ ಬೆಳ್ತಂಗಡಿ ನ್ಯಾಯಾಲಯಕ್ಕೆ ಹಾಜರು.

Published

on

ಬೆಳ್ತಂಗಡಿ : ನಕ್ಸಲ್ ಕರಪತ್ರ ಹಚ್ಚಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ನಕ್ಸಲ್ ಜಾನ್@ ಜಯಣ್ಣ@ಮಹೇಶ್ (49) ಎಂಬಾತನನ್ನು ಕೇರಳದ ತ್ರಿಶೂರ್ ಜೈಲಿನಿಂದ ಬಿಗಿ ಭದ್ರತೆಯಲ್ಲಿ ಕೇರಳ ವಿಶೇಷ ಪೊಲೀಸರು ಬೆಳ್ತಂಗಡಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ.

2012 ರಲ್ಲಿ ಬೆಳ್ತಂಗಡಿ ಪೊಲೀಸ್ ಠಾಣಾ ವ್ಯಾಪ್ತಿಯ ಕೊತ್ಲೂರು ಎಂಬಲ್ಲಿ ಕೊತ್ಲೂರಿನ ಲಿಂಗಪ್ಪ ಮಲೆಕುಡಿಯ ಮನೆಯ ಅಂಗಳದಲ್ಲಿ ಕರಪತ್ರ ಹಚ್ಚಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಇತ್ತಿಚೆಗೆ ಪ್ರಕರಣದ ಮರು ತನಿಖೆಗೆ ನ್ಯಾಯಾಲಯ ಆದೇಶ ಹೊರಡಿಸಿತ್ತು.
ಮೂಲಃತ ರಾಯಚೂರು ಜಿಲ್ಲೆಯ ಅರೋಲಿ ಗ್ರಾಮದ ನಿವಾಸಿ ಜಯಣ್ಣ ಕಳೆದ ಆರು ತಿಂಗಳಿಂದ ಕೇರಳ ಜೈಲಿನಲ್ಲಿದ್ದರು. ರಾಜ್ಯದ ಸಿಎಂ ಮುಂದೆ ಇತ್ತಿಚೆಗೆ ಶರಣಾತಿಯಾಗಿದ್ದ ಜಯಣ್ಣನನ್ನು ಕೇರಳ ಪೋಲಿಸರು ಬೆಳ್ತಂಗಡಿ ನ್ಯಾಯಾಲಯದಲ್ಲಿ ಹಾಜರಾತಿಗಾಗಿ ಕರೆತಂದಿದ್ದಾರೆ.

Continue Reading
Click to comment

Leave a Reply

Your email address will not be published. Required fields are marked *

Advertisement