Published
3 hours agoon
By
Akkare News
ರಾಜ್ಯ ಸರ್ಕಾರವು ಸ್ಥಳೀಯ ಸಂಸ್ಥೆಗಳ ಚುನಾವಣಾ ಪ್ರಕ್ರಿಯೆಯಲ್ಲಿ ಮಹತ್ವದ ಬದಲಾವಣೆ ತರಲು ಮುಂದಾಗಿದ್ದು, ಇಲೆಕ್ಟ್ರಾನಿಕ್ ಮತಯಂತ್ರಗಳ (EVM) ಬದಲಾಗಿ ಮತಪತ್ರಗಳನ್ನು (Ballot Paper) ಬಳಸಲು ಅವಕಾಶ ನೀಡುವ ತಿದ್ದುಪಡಿ ವಿಧೇಯಕವನ್ನು ವಿಧಾನಸಭೆಯಲ್ಲಿ ಮಂಡಿಸಿದೆ.

ಮಂಗಳವಾರದ ಕಲಾಪದಲ್ಲಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಹೆಚ್.ಕೆ. ಪಾಟೀಲ್ ಅವರು ‘ಕರ್ನಾಟಕ ಗ್ರಾಮ ಸ್ವರಾಜ್ ಮತ್ತು ಪಂಚಾಯತ್ ರಾಜ್ (ತಿದ್ದುಪಡಿ) ವಿಧೇಯಕ’ ಸೇರಿದಂತೆ ಒಟ್ಟು ನಾಲ್ಕು ಪ್ರಮುಖ ವಿಧೇಯಕಗಳನ್ನು ಮಂಡಿಸಿದರು.
ಇವಿಎಂ ಬಳಕೆಯಿಂದ ಮುಕ್ತ ಮತ್ತು ನ್ಯಾಯಸಮ್ಮತ ಚುನಾವಣೆಗೆ ಧಕ್ಕೆಯಾಗುತ್ತಿದೆ ಎಂಬ ಆತಂಕವಿರುವುದರಿಂದ, ಪಾರದರ್ಶಕತೆ ಕಾಪಾಡಲು ಮತಪತ್ರಗಳನ್ನು ಬಳಸುವ ನಿರ್ಧಾರಕ್ಕೆ ಬರಲಾಗಿದೆ. ಈವರೆಗೆ ರಾಜ್ಯ ಚುನಾವಣಾ ಆಯೋಗವು ನಿರ್ವಹಿಸುತ್ತಿದ್ದ ಮತದಾರರ ಪಟ್ಟಿ ಸಿದ್ಧಪಡಿಸುವ ಜವಾಬ್ದಾರಿಯನ್ನು ಈಗ ಉಪವಿಭಾಗಾಧಿಕಾರಿಗಳಿಗೆ (AC) ನೀಡಲು ವಿಧೇಯಕದಲ್ಲಿ ಪ್ರಸ್ತಾಪಿಸಲಾಗಿದೆ.

ಪಟ್ಟಿಗಳ ಸಮನ್ವಯ: ಕೇಂದ್ರ ಚುನಾವಣಾ ಆಯೋಗದ ಮತದಾರರ ಪಟ್ಟಿಯನ್ನು ರಾಜ್ಯದ ಸ್ಥಳೀಯ ಸಂಸ್ಥೆಗಳ ಚುನಾವಣಾ ಪಟ್ಟಿಯೊಂದಿಗೆ ಸಮನ್ವಯಗೊಳಿಸಿ ಬಳಸಿಕೊಳ್ಳಲು ಕ್ರಮ ಕೈಗೊಳ್ಳಲಾಗಿದೆ.
ಕಟ್ಟುನಿಟ್ಟಿನ ಕ್ರಮ: ಮತದಾರರ ಮೇಲೆ ಪ್ರಭಾವ ಬೀರುವ ಅಥವಾ ದುರ್ಬಳಕೆ ಮಾಡಿಕೊಳ್ಳುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವ ಅಂಶವನ್ನೂ ತಿದ್ದುಪಡಿಯಲ್ಲಿ ಸೇರಿಸಲಾಗಿದೆ.






