Published
1 week agoon
By
Akkare News
40 ಜನರ ಗುಂಪು ಕಳೆದ ಶನಿವಾರ ಪ್ರವಾಸಕ್ಕಾಗಿ ತಮ್ಮ ಊರಿನಿಂದ ಕರ್ನಾಟಕಕ್ಕೆ ಆಗಮಿಸಿತ್ತು. ಮಂಗಳವಾರ (ಏ.07) ಸಂಜೆ 5:35ರ ಸುಮಾರಿಗೆ ಶ್ರೀನಂದಾ ದಿಢೀರ್ ಕಣ್ಮರೆಯಾಗಿದ್ದರು.
ಚಿಕ್ಕಮಗಳೂರು: ಚಿಕ್ಕಮಗಳೂರಿನ ಚಂದ್ರದ್ರೋಣ ಪರ್ವತ ಶ್ರೇಣಿಯಲ್ಲಿ ಪ್ರವಾಸಕ್ಕೆ ಬಂದು ನಿಗೂಢವಾಗಿ ನಾಪತ್ತೆಯಾಗಿದ್ದ ಕೇರಳ ಮೂಲದ ಬಾಲಕಿ ಶ್ರೀನಂದಾ (15) ಶವವಾಗಿ ಪತ್ತೆಯಾಗಿದ್ದು, ಪೋಷಕರ ಆಕ್ರಂದನ ಮುಗಿಲು ಮುಟ್ಟಿದೆ.
ಶ್ರೀನಂದಾ ಸಾವಿನಲ್ಲಿ ಯಾವುದೇ ಅಸಹಜತೆ ಇಲ್ಲ ಎಂದು ಮರಣೋತ್ತರ ಪರೀಕ್ಷಾ ವರದಿಯಿಂದ ತಿಳಿದುಬಂದಿದೆ.
ವರದಿಯ ಪ್ರಕಾರ, ತಲೆಯ ಬಲಭಾಗಕ್ಕೆ ಗಂಭೀರವಾದ ಗಾಯವಾಗಿರುವುದೇ ಸಾವಿಗೆ ಕಾರಣ ಎಂದು ಉಲ್ಲೇಖಿಸಲಾಗಿದೆ.
ಶ್ರೀನಂದಾ ಅವರ ದೇಹದಾದ್ಯಂತ ಗಾಯಗಳು ಪತ್ತೆಯಾಗಿದ್ದು, ಹಲವು ಸ್ಥಳಗಳಲ್ಲಿ ಮೂಳೆಗಳು ಮುರಿದಿದ್ದು, ಇದೆಲ್ಲವೂ ಮೇಲಿಂದ ಬಿದ್ದಿರುವುದರಿಂದ ಸಂಭವಿಸಿವೆ ಎಂದು ಮರಣೋತ್ತರ ವರದಿ ಹೇಳಿದೆ.
ಚಿಕ್ಕಮಗಳೂರು ಜಿಲ್ಲೆಯ ಜಿಲ್ಲಾಸ್ಪತ್ರೆಯಲ್ಲಿ ಶುಕ್ರವಾರ ಸಂಜೆ ಎರಡು ಶಸ್ತ್ರಚಿಕಿತ್ಸಕರ ತಂಡದಿಂದ ಮರಣೋತ್ತರ ಪರೀಕ್ಷೆ ನಡೆಸಲಾಗಿದ್ದು, ಹಿರಿಯ ಅಧಿಕಾರಿಗಳ ಮೇಲ್ವಿಚಾರಣೆಯಲ್ಲಿ ಸಂಪೂರ್ಣ ಪ್ರಕ್ರಿಯೆಯನ್ನು ವಿಡಿಯೋ ದಾಖಲಿಸಲಾಗಿದೆ. ಈ ಪರೀಕ್ಷೆಯನ್ನು ವೈದ್ಯರಾದ ಲೋಹಿತ್ ಮತ್ತು ಜಯಲಕ್ಷ್ಮಿ ನಡೆಸಿದ್ದಾರೆ.