Connect with us

ಇತರ

ಕೋಡಿಂಬಾಡಿ ಗ್ರಾಮ ಪಂಚಾಯತ್ ಮತ್ತು ಅರಿವು ಕೇಂದ್ರದ ವತಿಯಿಂದ ಓದುವ ಬೆಳಕು ಕಾರ್ಯಕ್ರಮ ದಡಿಯಲ್ಲಿ ಗ್ರಾಮೀಣ ಮಕ್ಕಳ ಬೇಸಿಗೆ ಶಿಬಿರ

Published

on

ಪುತ್ತೂರು: ಕೋಡಿಂಬಾಡಿ ಗ್ರಾಮ ಪಂಚಾಯತ್ ಮತ್ತು ಅರಿವು ಕೇಂದ್ರದ ವತಿಯಿಂದ ಓದುವ ಬೆಳಕು ಕಾರ್ಯಕ್ರಮ ದಡಿಯಲ್ಲಿ ಗ್ರಾಮೀಣ ಮಕ್ಕಳ ಬೇಸಿಗೆ ಶಿಬಿರ ಕೋಡಿಂಬಾಡಿ ಹಿ.ಪ್ರಾ. ಶಾಲೆಯಲ್ಲಿ ನಡೆಯಿತು.
ಉದ್ಘಾಟನಾ ಸಮಾರಂಭದ ಅಧ್ಯಕ್ಷತೆ ವಹಿಸಿದ್ದ ಗ್ರಂಥಾಲಯ ಸಮಿತಿಯ ಸದಸ್ಯ ಕೇಶವ ಭಂಡಾರಿ ಕೈಪ ದೀಪ ಪ್ರಜ್ವಲನೆಯ ಮೂಲಕ ಉದ್ಘಾಟಿಸಿದರು. ಬಳಿಕ ಮಾತನಾಡಿದ ಅವರು ಮಕ್ಕಳು ಮೊಬೈಲ್, ಟಿ.ವಿ.ಗಳಿಂದ ದೂರವಿರಿಸಲು ಇಂತಹ ಶಿಬಿರಗಳು ಬಹಳ ಅತ್ಯಗತ್ಯ ಎಂದು ಹೇಳಿದರು. ಕೋಡಿಂಬಾಡಿ ಶಾಲಾ ಮುಖ್ಯಗುರು, ಸಮಿತಿ ಸದಸ್ಯ ಬಾಲಕೃಷ್ಣ ಮಕ್ಕಳಿಗೆ ಶಿಬಿರದ ಪ್ರಯೋಜನಗಳನ್ನು ತಿಳಿಸಿದರು. ಸಂಪನ್ಮೂಲ ವ್ಯಕ್ತಿಯಾಗಿದ್ದ ಕೋಡಿಂಬಾಡಿ ಕ್ಲಸ್ಟರ್ ಸಿ.ಆರ್.ಪಿ. ದೇವಕಿ ಶಿಬಿರ ನಡೆಸಿಕೊಟ್ಟರು. ಕೋಡಿಂಬಾಡಿ ಶಾಲಾ ಎಸ್. ಡಿ.ಎಮ್.ಸಿ. ಅಧ್ಯಕ್ಷ ಶೇಖರ ಪೂಜಾರಿ ಜೇಡರಪಾಲು ಶುಭ ಹಾರೈಸಿದರು. ಗ್ರಾಮ ಪಂಚಾಯತಿ ಕಾರ್ಯದರ್ಶಿ ಅಣ್ಣು ಪಿ. ಮಾತನಾಡಿ ಗ್ರಾಮದ ಮಕ್ಕಳು ಹೆಚ್ಚಿನ ಸಂಖ್ಯೆಯಲ್ಲಿ ಶಿಬಿರದ ಪ್ರಯೋಜನಗಳನ್ನು ಪಡೆದುಕೊಳ್ಳಬೇಕು ಎಂದು ಹೇಳಿದರು.

 ಸಮಿತಿಯ ಸದಸ್ಯರಾದ ದಿನೇಶ್ ಶೆಟ್ಟಿ ಪಿಜಿನಡ್ಕ, ಸಂಪತ್ ಗೌಡ, ಕವಿತ, ಗಣೇಶ್ ಭಟ್, ಪವಿತ್ರಾ ಶೆಟ್ಟಿ, ಮಹಾಲಿಂಗೇಶ್ವರ ಸಂಜೀವಿನಿ ಒಕ್ಕೂಟದ ಎಂ.ಬಿ.ಕೆ. ಸಂಧ್ಯಾ ರಾಮ ಚಂದ್ರ ಗೌಡ ಹಾಗೂ ಎಲ್.ಸಿ.ಆರ್.ಪಿ. ಪ್ರಿಯ ಉಪಸ್ಮಿತರಿದ್ದರು. ಅರಿವು ಕೇಂದ್ರ ಮೇಲ್ವಿ ಚಾರಕಿ ಕುಸುಮ ವಿ. ರೈ ಸ್ವಾಗತಿಸಿ ಭವ್ಯಾ ಶೆಟ್ಟಿ ಕಾರ್ಯಕ್ರಮ ನಿರೂಪಿಸಿ ವಂದಿಸಿದರು. ಶಿಬಿರದಲ್ಲಿ ಸುಮಾರು 26 ಜನ ಮಕ್ಕಳು ಭಾಗವಹಿಸಿದ್ದರು. ಗ್ರಾಮ ಪಂಚಾಯತ್ ವತಿಯಿಂದ ಲಘು ಉಪಹಾರದ ವ್ಯವಸ್ಥೆ ಮಾಡಲಾಗಿತ್ತು.

ಶಿಬಿರದಲ್ಲಿ ಮಕ್ಕಳಿಗೆ ಯೋಗ, ಸೂರ್ಯ ನಮಸ್ಕಾರ, ಕಥೆ ಹೇಳುವುದು, ಡ್ರಾಯಿಂಗ್, ಗೂಡು ದೀಪ, ಪೇಪರ್ ಕ್ರಾಫ್ಟ್ ಮುಂತಾದ ವಿವಿಧ ರೀತಿಯ ಚಟುವಟಿಕೆಗಳನ್ನು ನಡೆಸಿಕೊಡಲಾಯಿತು. ಶಿಬಿರದ ಸಮಾರೋಪ ಸಮಾರಂಭ ಸಮಿತಿಯ ಸದಸ್ಯ ಕೇಶವ ಭಂಡಾರಿ ಕೈಪ ಅವರ ಅಧ್ಯಕ್ಷತೆಯಲ್ಲಿ ನಡೆಯಿತು. ಮುಖ್ಯ ಅತಿಥಿಯಾಗಿ ಗ್ರಾಮ ಪಂಚಾಯತ್ ಆಡಳಿತಾಧಿಕಾರಿಯಾಗಿರುವ ಉಪ್ಪಿನಂಗಡಿ ವಲಯ ಅರಣ್ಯಾಧಿಕಾರಿ ಎಚ್.ಪಿ. ರಾಘವೇಂದ್ರ, ಗ್ರಾ.ಪಂ. ಕಾರ್ಯದರ್ಶಿ ಅಣ್ಣು ಪಿ, ಸಂಪನ್ಮೂಲ ವ್ಯಕ್ತಿಯಾಗಿದ್ದ ಕೋಡಿಂಬಾಡಿ ಕ್ಲಸ್ಟರ್ ಸಿ.ಆರ್.ಪಿ. ದೇವಕಿ, ಕೋಡಿಂಬಾಡಿ ಶಾಲಾ ಎಸ್.ಡಿ.ಎಂ.ಸಿ‌. ಉಪಾಧ್ಯಕ್ಷೆ ಸ್ಪೂರ್ತಿ ರಾಜಮಣಿ ರೈ, ಸಲಹಾ ಸಮಿತಿ ಸದಸ್ಯರಾದ ಗಣೇಶ ಭಟ್, ಪವಿತ್ರ ಶೆಟ್ಟಿ, ಕವಿತ, ಭವ್ಯಾ ಶೆಟ್ಟಿ ಮತ್ತು ಲಕ್ಷ್ಮೀ ರೈ ಭಾಗವಹಿಸಿದ್ದರು.

ಶಿಬಿರ ನಡೆಸಿಕೊಟ್ಟ ದೇವಕಿ ಅವರನ್ನು ಗ್ರಾಮ ಪಂಚಾಯತ್ ವತಿಯಿಂದ ಶಾಲು ಹೊದಿಸಿ ಫಲಪುಷ್ಪ ಮತ್ತು ಸ್ಮರಣಿಕೆ ನೀಡಿ ಗೌರವಿಸಲಾಯಿತು. ಮಕ್ಕಳಿಗೆ ಲಘು ಉಪಹಾರ ನೀಡಿದ ಸ್ಪೂರ್ತಿ ರಾಜಮಣಿ ರೈ, ಪ್ರಿಯ ರಮೇಶ್ ಕೆ, ಲಕ್ಷ್ಮೀ ರೈ ,ಕೇಶವ ಭಂಡಾರಿ ಕೈಪ ಮತ್ತು ಗಣೇಶ ಭಟ್ ಅವರನ್ನು ಶಾಲು ಹೊದಿಸಿ ಸ್ಮರಣಿಕೆ ನೀಡಿ ಗೌರವಿಸಲಾಯಿತು. ಮಹಾಲಿಂಗೇಶ್ವರ ಸಂಜೀವಿನಿ ಒಕ್ಕೂಟದ ಪಶುಸಖಿ ಭವ್ಯಾ ಶೆಟ್ಟಿ ಕಾರ್ಯಕ್ರಮ ನಿರೂಪಿಸಿದರು. ಅರಿವು ಕೇಂದ್ರದ ಮೇಲ್ವಿಚಾರಕಿ ಕುಸುಮ ವಿ.ರೈ ಸ್ವಾಗತಿಸಿದರು. ಪುನರ್ವಸತಿ ಕಾರ್ಯಕರ್ತೆ ಲೀಲಾವತಿ ಮತ್ತು ಸಿಬ್ಬಂದಿ ವರ್ಗ ಸಹ ಕರಿಸಿದರು. ಸುಮಾರು 45 ಮಕ್ಕಳು ಭಾಗವಹಿಸಿದ್ದರು. ಗ್ರಾಮ ಪಂಚಾಯತ್ ವತಿಯಿಂದ ಊಟದ ವ್ಯವಸ್ಥೆ ಮಾಡಲಾಗಿತ್ತು.

Continue Reading
Click to comment

Leave a Reply

Your email address will not be published. Required fields are marked *

Advertisement