Published
6 hours agoon
By
Akkare News
ಬಹಳ ಅಚ್ಚರಿಯ ವಿಚಾರವೆಂದರೆ, ಈ ಹಗರಣದಲ್ಲಿ ಭಾಗಿಯಾಗಿರುವ ಯಶ್ ಯಾದವ್ ಬ್ಯಾಚುಲರ್ ಆಫ್ ಆಯುರ್ವೇದಿಕ್ ಮೆಡಿಕಲ್ ಸೈನ್ಸಸ್ (BAMS) ವಿದ್ಯಾರ್ಥಿಯಾಗಿದ್ದಾನೆ. ಇತರರಿಗೆ ನೀಟ್ ಪ್ರಶ್ನೆಪತ್ರಿಕೆ ನೀಡಿದ್ದ ಈತನೇ ಈ ಪರೀಕ್ಷೆಯಲ್ಲಿ ತೇರ್ಗಡೆಯಾಗಲು ವಿಫಲನಾಗಿದ್ದಾನೆ ಎಂಬುದು ತನಿಖೆಯಿಂದ ತಿಳಿದುಬಂದಿದೆ. ಸಿಕರ್ನಲ್ಲಿರುವ ಕೋಚಿಂಗ್ ಸೆಂಟರ್ಗಳ ವಿದ್ಯಾರ್ಥಿಗಳು ಈ ಸೋರಿಕೆಯಾದ ಪ್ರಶ್ನೆಪತ್ರಿಕೆಯನ್ನು ಪಡೆಯಲು ಬರೋಬ್ಬರಿ 2 ಲಕ್ಷದಿಂದ 5 ಲಕ್ಷ ರೂಪಾಯಿಗಳವರೆಗೆ ಹಣ ಪಾವತಿಸಿದ್ದಾರೆ ಎಂದು ಸ್ವತಃ ವಿದ್ಯಾರ್ಥಿಗಳೇ ಅಧಿಕಾರಿಗಳ ಮುಂದೆ ಬಾಯ್ಬಿಟ್ಟಿದ್ದಾರೆ.
ಪ್ರಕರಣದ ಜಾಡು ಹಿಡಿದು ಹೊರಟಿರುವ ಸಿಬಿಐ ಅಧಿಕಾರಿಗಳು, ಈಗಾಗಲೇ ಸಿಕರ್ನ ವಿವಿಧ ಕೋಚಿಂಗ್ ಸಂಸ್ಥೆಗಳ ಸಿಬ್ಬಂದಿ ಹಾಗೂ ಮಾಲೀಕರನ್ನು ತೀವ್ರ ವಿಚಾರಣೆಗೆ ಒಳಪಡಿಸಿದ್ದಾರೆ. ಈ ಹಗರಣದ ಹಿಂದಿನ ಪ್ರಮುಖ ರೂವಾರಿ ಯಾರು ಎಂಬುದನ್ನು ಪತ್ತೆ ಹಚ್ಚಲು ತನಿಖಾ ಸಂಸ್ಥೆ ಹಗಲಿರುಳು ಶ್ರಮಿಸುತ್ತಿದೆ. ಪ್ರಕರಣದಲ್ಲಿ ಹೆಸರು ಕೇಳಿಬಂದಿರುವ ಶುಭಂ ಖೈರ್ನಾರ್ ಎಂಬಾತ, ತಾನು ಈ ಹಗರಣದ ಮಾಸ್ಟರ್ ಮೈಂಡ್ ಅಲ್ಲ ಎಂದು ಅಧಿಕಾರಿಗಳ ಮುಂದೆ ತನ್ನ ಮೇಲಿನ ಆರೋಪವನ್ನು ತಳ್ಳಿಹಾಕಿದ್ದಾನೆ.