Connect with us

ಇತರ

ಹಾಸನದಲ್ಲಿ ಲೋಕಾಯುಕ್ತ ಬಲೆಗೆ : ₹48 ಸಾವಿರ ಲಂಚ ಪಡೆಯುವಾಗ ಬಿಲ್ ಕಲೆಕ್ಟರ್ ಬಂಧನ

Published

on

ಹಾಸನ : ಮೇ 21 ರಂದು, ಇಸ್ವತ್ತು ನೀಡಲು ಲಂಚ ಬೇಡಿಕೆ ಇಟ್ಟಿದ್ದ ಬಿಲ್ ಕಲೆಕ್ಟರ್ ಒಬ್ಬರು ಲೋಕಾಯುಕ್ತ ಬಲೆಗೆ ಬಿದ್ದ ಘಟನೆ ಹಾಸನ ಜಿಲ್ಲೆಯ ಅರಕಲಗೂಡು ತಾಲ್ಲೂಕಿನ ಮಲ್ಲಿಪಟ್ಟಣ ಗ್ರಾಮ ಪಂಚಾಯಿತಿಯಲ್ಲಿ ನಡೆದಿದೆ.

ಮಲ್ಲಿಪಟ್ಟಣ ಗ್ರಾಮ ಪಂಚಾಯಿತಿಯ ಬಿಲ್ ಕಲೆಕ್ಟರ್ ಆಗಿರುವ ಹರೀಶ್, ಸೋಮಶೇಖರ್ ಎಂಬುವವರಿಂದ ಇಸ್ವತ್ತು ನೀಡುವ ಸಂಬಂಧ ₹48 ಸಾವಿರ ಲಂಚಕ್ಕೆ ಬೇಡಿಕೆ ಇಟ್ಟಿದ್ದಾನೆ ಎನ್ನಲಾಗಿದೆ.

ಈ ಕುರಿತು ದೂರು ದಾಖಲಾದ ಹಿನ್ನೆಲೆ, ಲೋಕಾಯುಕ್ತ ಇನ್ಸ್‌ಪೆಕ್ಟರ್ ಶಿಲ್ಪಾ ನೇತೃತ್ವದ ತಂಡ ದಾಳಿ ನಡೆಸಿ, ಲಂಚದ ಹಣ ಸ್ವೀಕರಿಸುವ ವೇಳೆ ಹರೀಶ್ ಅವರನ್ನು ಬಲೆಗೆ ಬೀಳಿಸಿದೆ. ದಾಳಿಯ ವೇಳೆ ಲಂಚದ ಹಣ ಸಮೇತ ಹರೀಶ್ ಅವರನ್ನು ಲೋಕಾಯುಕ್ತ ಪೊಲೀಸರು ವಶಕ್ಕೆ ಪಡೆದು, ಮುಂದಿನ ಕ್ರಮ ಕೈಗೊಂಡಿದ್ದಾರೆ

Continue Reading
Click to comment

Leave a Reply

Your email address will not be published. Required fields are marked *

Advertisement
Exit mobile version