Published
6 hours agoon
By
Akkare News
ತಮ್ಮ ಸುದೀರ್ಘ ರಾಜಕೀಯ ಪಯಣವನ್ನು ಸ್ಮರಿಸುತ್ತಾ ಭಾವುಕರಾದ ಸಿದ್ದರಾಮಯ್ಯ, “ಮೇರುನಟ ಡಾ. ರಾಜ್ಕುಮಾರ್ ಅವರು ಜನರನ್ನು ‘ಅಭಿಮಾನಿ ದೇವರುಗಳು’ ಎಂದು ಕರೆಯುತ್ತಿದ್ದರು. ಒಬ್ಬ ರಾಜಕಾರಣಿಯಾಗಿ ನಾನು ಕೂಡ ಸಂವಿಧಾನವೇ ನನ್ನ ಧರ್ಮ ಎಂದು ತಿಳಿದುಕೊಂಡಿದ್ದೇನೆ. ನನ್ನ ಪಾಲಿಗೆ ಈ ರಾಜ್ಯದ ಮತದಾರರೇ ಅಭಿಮಾನಿ ದೇವರುಗಳು. ನನಗೆ ರಾಜ್ಯದ ಜನತೆ ಎರಡು ಬಾರಿ ಮುಖ್ಯಮಂತ್ರಿಯಾಗುವ ಮತ್ತು ಎರಡು ಬಾರಿ ವಿಧಾನಸಭೆಯ ವಿರೋಧ ಪಕ್ಷದ ನಾಯಕನಾಗಿ ಸೇವೆ ಸಲ್ಲಿಸುವ ಐತಿಹಾಸಿಕ ಅವಕಾಶವನ್ನು ನೀಡಿದ್ದಾರೆ” ಎಂದು ಕೃತಜ್ಞತೆ ಸಲ್ಲಿಸಿದರು.