Published
2 hours agoon
By
Akkare News
ರಾಜ್ಯ ರಾಜಕಾರಣದಲ್ಲಿ ಸಿದ್ದರಾಮಯ್ಯ ಅವರ ರಾಜೀನಾಮೆ ಪ್ರಕ್ರಿಯೆ ಮುಗಿಯುತ್ತಿದ್ದಂತೆ, ಮುಂದಿನ ಮುಖ್ಯಮಂತ್ರಿ ಯಾರು ಎಂಬ ಕುತೂಹಲಕ್ಕೆ ಈಗ ಭರ್ಜರಿ ತೆರೆ ಬಿದ್ದಿದೆ. ಕೆಪಿಸಿಸಿ ಅಧ್ಯಕ್ಷ ಹಾಗೂ ಡಿಸಿಎಂ ಡಿ.ಕೆ. ಶಿವಕುಮಾರ್ ಅವರ ಪರಮಾಪ್ತ ಗುರುಗಳಾದ ರಾಜಗುರು ದ್ವಾರಕನಾಥ್ ಗುರೂಜಿ ಅವರು ರಾಜ್ಯ ರಾಜಕೀಯದ ಭವಿಷ್ಯದ ಬಗ್ಗೆ ಅತ್ಯಂತ ಸ್ಪೋಟಕ ನುಡಿಗಳನ್ನು ಆಡಿದ್ದಾರೆ.
ಡಿ.ಕೆ. ಶಿವಕುಮಾರ್ ಅವರೊಂದಿಗಿನ ತಮ್ಮ 35 ವರ್ಷಗಳ ಸುದೀರ್ಘ ಒಡನಾಟವನ್ನು ನೆನಪಿಸಿಕೊಂಡ ಅವರು, “ಹಿಂದೆ ಮಾಜಿ ಸಿಎಂ ಬಂಗಾರಪ್ಪ ಅವರ ಸಂಪುಟದಲ್ಲಿ ಅತ್ಯಂತ ಸಣ್ಣ ವಯಸ್ಸಿಗೆ ಜೈಲು ಮಂತ್ರಿಯಾಗಿದ್ದಾಗಲೇ, ‘ನೀನು ಮುಂದೊಂದು ದಿನ ಈ ರಾಜ್ಯಕ್ಕೆ ಮುಖ್ಯಮಂತ್ರಿ ಆಗ್ತೀಯಾ’ ಎಂದು ಭವಿಷ್ಯ ಹೇಳಿದ್ದೆ. ಅವನು ನಮ್ಮ ಮನೆಯ ಮಗನಿದ್ದಂತೆ” ಎಂದಿದ್ದಾರೆ.