Published
2 months agoon
By
Akkare News
ಕಾರ್ಯದರ್ಶಿ ಕೃಷ್ಣ ಪ್ರಸಾದ್ ಕೆದಿಲಾಯರು ಮಾತನಾಡಿ ಶಾಲಾ ಚಟುವಟಿಕೆಗಳಲ್ಲಿ ಹೆಚ್ಚು ತೊಡಗಿಸಿಕೊಂಡು ಮೊಬೈಲ್ ಫೋನನ್ನು ಬಳಸದೆ ಸಮಯವನ್ನು ಸರಿಯಾಗಿ ಸದುಪಯೋಗ ಪಡಿಸಿಕೊಂಡು ತಮಗೆ ಆಸಕ್ತಿ ಇರುವ ಚಟುವಟಿಕೆಗಳಲ್ಲಿ ಮುಂದೆ ಬಂದು ಕೀರ್ತಿವಂತರಾಗಿ ಬಾಳಿ ದೇವರ ಅನುಗ್ರಹ ನಿಮಗಿರಲಿ ಎಂದರು. ಉಪಾಧ್ಯಕ್ಷರಾದ ಶ್ರೀ ಪ್ರಸನ್ನ ಭಟ್ ರವರು ಮಾತನಾಡಿ ಈ ಸಂಸ್ಥೆಯು ಸಂಸ್ಕಾರಯುತ ಶಿಕ್ಷಣವನ್ನು ಕೊಡಲು ಪ್ರಯತ್ನಿಸುತ್ತಿದ್ದು ಅನೇಕ ಮಹಾಪುರುಷರ ಬದುಕನ್ನು ಮಾದರಿಯಾಗಿ ಇಟ್ಟುಕೊಂಡು ಬದುಕಬೇಕು. ಕಠಿಣ ಪ್ರಯತ್ನದಿಂದ ಸಾಧನೆ ಸಾಧ್ಯ ಎಂದರು. ಜೊತೆಕಾರ್ಯದರ್ಶಿ ಶ್ರೀ ಸುಬ್ರಾಯ ಬಿ ಎಸ್ ರವರು ಮಾತನಾಡಿ ಈ ಶೈಕ್ಷಣಿಕ ವರ್ಷದಲ್ಲಿ ಉತ್ತಮ ವಿದ್ಯಾಭ್ಯಾಸ ದೊರಕುವಂತಾಗಲಿ ಎಂದು ಶುಭ ಹಾರೈಸಿದರು.