Published
5 hours agoon
By
Akkare News
ಈಗ ಬಾಡಿಗೆ ಕಟ್ಟಡದಲ್ಲಿ ಮೂಲ ಸೌಕರ್ಯಗಳ ನವೀಕರಣ ಕಾರ್ಯ ಮುಗಿದಿದೆ. ಹೈಕೋರ್ಟ್ನಿಂದ ಸಿಗಬೆಕಾದ ಅನುಮತಿ ಕೂಡಾ ಸಿಕ್ಕಿದೆ. ಇನ್ನು ಕಡಬ ತಾಲೂಕಿನ ವ್ಯಾಪ್ತಿಗೆ ಸಂಬAಧಿಸಿದ ನ್ಯಾಯಾಲಯದ ಕಲಾಪಗಳನ್ನು ಕಡಬದಲ್ಲಿಯೇ ನಡೆಸಲಾಗುತ್ತಿದೆ. ಪ್ರಸ್ತುತ ಪುತ್ತೂರು ನ್ಯಾಯಾಲಯದಲ್ಲಿರುವ ಕಡಬ ತಾಲೂಕು ವ್ಯಾಪ್ತಿಯ ಪ್ರಕರಣಗಳ ಕಡತಗಳನ್ನು ಈಗಾಗಲೇ ಪುತ್ತೂರು ತಾಲೂಕಿನಿಂದ ಬೇರ್ಪಡಿಸಿ ಪ್ರತ್ಯೇಕಿಸಲಾಗಿದೆ ಎಂದು ತಿಳಿದು ಬಂದಿದೆ. ಹೈಕೋರ್ಟ್ ಸೂಚನೆಯಂತೆ ನವೀಕರಣ ಕಾರ್ಯ ಮುಗಿಸಲಾಗಿದ್ದು, ಕಟ್ಟಡ ಮಾಲೀಕರು ಹಾಗೂ ಜಿಲ್ಲಾಸತ್ರ ನ್ಯಾಯಾಧೀಶರ ಮಧ್ಯೆ ಒಪ್ಪಂದ ಪ್ರಕ್ರಿಯೆ ಎಲ್ಲವೂ ಮುಗಿದಿದೆ. ನ್ಯಾಯಾಲಯ ಪ್ರಾರಂಭವಾಗುವುದರಿAದ ಕಡಬ ತಾಲೂಕಿನ ಸಾರ್ವಜನಿಕರಿಗೆ ಮತ್ತು ನ್ಯಾಯವಾದಿಗಳಿಗೆ ಬಹಳಷ್ಟು ಸಮಯ ಹಾಗೂ ಹಣದ ಉಳಿತಾಯವಾಗಲಿದ್ದು, ಸ್ಥಳೀಯವಾಗಿ ಶೀಘ್ರ ನ್ಯಾಯದಾನ ದೊರೆಯಲು ಸಹಕಾರಿಯಾಗಲಿದೆ.