Published
15 hours agoon
By
Akkare News
ಕರ್ನಾಟಕ ರಾಜ್ಯದ ನೂತನ ಮುಖ್ಯಮಂತ್ರಿ ಯಾಗಿ ಡಿಕೆ ಶಿವಕುಮಾರ್ ಅವರು ಇಂದು ಪ್ರಮಾಣವಚನ ಸ್ವೀಕರಿಸಲಿದ್ದಾರೆ. ಈ ಹಿನ್ನೆಲೆಯಲ್ಲಿ ಬೆಂಗಳೂರಿನ ಈ ಭಾಗದ ಸರ್ಕಾರಿ ನೌಕರರಿಗೆ ಮಧ್ಯಾಹ್ನದ ನಂತರ ರಜೆ ಘೋಷಿಸಲಾಗಿದೆ.
ವಿಧಾನ ಸೌಧ, ವಿಕಾಸ ಸೌಧ ಹಾಗೂ ಬಹುಮಹಡಿಗಳ ಕಟ್ಟಡದಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಅಧಿಕಾರಿ ಮತ್ತು ಸಿಬ್ಬಂದಿಗಳಿಗೆ ಮಧ್ಯಾಹ್ನದ ನಂತರ ರಜೆ ಘೋಷಿಸಲಾಗಿದೆ. ಈ ಕುರಿತು ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆಯ ಅಧೀನ ಕಾರ್ಯದರ್ಶಿ ಆರ್. ಯದು ಕುಮಾರ್ ಅಧಿಕೃತ ಅಧಿಸೂಚನೆ ಹೊರಡಿಸಿದ್ದಾರೆ.