Connect with us

ಅಪಘಾತ

ಗಡಿಯಾರ: ಭೀಕರ ಅಪಘಾತ: ಕಾರು ಪಲ್ಟಿ: ಚಾಲಕ ಮೃತ್ಯು – ಮೂವರಿಗೆ ಗಂಭೀರ ಗಾಯ

Published

on

​ಮಂಗಳೂರು: ಚಾಲಕನ ನಿಯಂತ್ರಣ ತಪ್ಪಿದ ಕಾರೊಂದು ರಸ್ತೆ ಗುಂಡಿಗೆ ಬಿದ್ದು, ಬಳಿಕ ರಸ್ತೆ ಬದಿಯ ಸೂಚನಾ ಫಲಕಕ್ಕೆ ಢಿಕ್ಕಿ ಹೊಡೆದ ಪರಿಣಾಮ ಚಾಲಕ ಸ್ಥಳದಲ್ಲೇ ಮೃತಪಟ್ಟು, ಮೂವರು ಗಂಭೀರವಾಗಿ ಗಾಯಗೊಂಡಿರುವ ಭೀಕರ ಘಟನೆ ಮಂಗಳೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ಬಂಟ್ವಾಳ ತಾಲೂಕಿನ ಮಾಣಿ ಸಮೀಪದ ಗಡಿಯಾರ ಎಂಬಲ್ಲಿ ಜರುಗಿದೆ.

 

​ಅಪಘಾತದಲ್ಲಿ ತೀವ್ರವಾಗಿ ಗಾಯಗೊಂಡಿದ್ದ ಕಾರು ಚಾಲಕನನ್ನು ತಕ್ಷಣವೇ ಆಸ್ಪತ್ರೆಗೆ ಸಾಗಿಸುವ ಪ್ರಯತ್ನ ಮಾಡಲಾಯಿತಾದರೂ, ಅವರು ದಾರಿಮಧ್ಯೆ ಕೊನೆಯುಸಿರೆಳೆದಿದ್ದಾರೆ ಎಂದು ತಿಳಿದುಬಂದಿದೆ. ಮೃತ ಚಾಲಕನನ್ನು ಲಕ್ಷ್ಮೀಕಾಂತ್ ಎಂದು ಗುರುತಿಸಲಾಗಿದೆ.

​ಖಾಸಗಿ ಆಸ್ಪತ್ರೆಗೆ ದಾಖಲು: ಕಾರಿನಲ್ಲಿದ್ದ ಉಳಿದ ಮೂವರು ಪ್ರಯಾಣಿಕರಾದ ರಂಜಿತ್, ದರ್ಶನ್,ಶೋಭಾರವರಿಗೆ ಗಾಯಗಳಾಗಿದ್ದು, ಅವರನ್ನು ಮಂಗಳೂರಿನ ಖಾಸಗಿ ಆಸ್ಪತ್ರೆಗೆ ಕರೆದೊಯ್ಯಲಾಗಿದೆ ಎಂದು ಮೂಲಗಳು ತಿಳಿಸಿವೆ. ಗಾಯಾಳುಗಳ ಸ್ಥಿತಿ ಚಿಂತಾಜನಕವಾಗಿದೆ ಎನ್ನಲಾಗಿದೆ.

ಹಾಸನ ಮೂಲದವರು: ಅಪಘಾತಕ್ಕೊಳಗಾದ ಕಾರು ಹಾಸನ ಮೂಲದ್ದಾಗಿದ್ದು, ಕಾರಿನಲ್ಲಿದ್ದವರು ಮಂಗಳೂರಿನಿಂದ ಬೆಂಗಳೂರಿನ ಕಡೆಗೆ ಪ್ರಯಾಣಿಸುತ್ತಿದ್ದರು ಎಂದು ಪ್ರಾಥಮಿಕ ಮಾಹಿತಿಯಿಂದ ತಿಳಿದುಬಂದಿದೆ. ಡಿಕ್ಕಿಯ ರಭಸಕ್ಕೆ ಕಾರು ಭಾಗಶಃ ಜಖಂಗೊಂಡಿದೆ. ಅಲ್ಲದೇ ಕಾರು ಅಪಘಾತದ ವೇಳೆ ರಸ್ತೆಯಲ್ಲಿ ಎರಡು ಸುತ್ತು ಪಲ್ಟಿ ಹೊಡೆದಿರುವುದಾಗಿ ಪ್ರತ್ಯಕ್ಷದರ್ಶಿಗಳು ತಿಳಿಸಿದ್ದಾರೆ.

ಪುತ್ತೂರು ಸಂಚಾರಿ ಠಾಣೆಯವರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.

 

Continue Reading
Click to comment

Leave a Reply

Your email address will not be published. Required fields are marked *

Advertisement
Exit mobile version