Published
5 hours agoon
By
Akkare News
ಪುತ್ತೂರು, ಜೂನ್ 13: ಉಪ್ಪಿನಂಗಡಿ ಪಟ್ಟಣದ ಸಂಚಾರ ದಟ್ಟಣೆ ನಿವಾರಣೆ ಹಾಗೂ ರಸ್ತೆ ಸುರಕ್ಷತೆಯನ್ನು ಹೆಚ್ಚಿಸುವ ನಿಟ್ಟಿನಲ್ಲಿ ಉಪ್ಪಿನಂಗಡಿ ಅಂಡರ್ಪಾಸ್ನಿಂದ ಉಪ್ಪಿನಂಗಡಿ ನೇತ್ರಾವತಿ ಸೇತುವೆವರೆಗೆ ಚತುಷ್ಪಥ (ನಾಲ್ಕು ಪಥ) ರಸ್ತೆ ಅಭಿವೃದ್ಧಿಗೆ ₹3 ಕೋಟಿ ಅನುದಾನ ಬಿಡುಗಡೆಯಾಗಿರುವುದಾಗಿ ಪುತ್ತೂರು ವಿಧಾನಸಭಾ ಕ್ಷೇತ್ರದ ಶಾಸಕ ಅಶೋಕ್ ಕುಮಾರ್ ರೈ ತಿಳಿಸಿದ್ದಾರೆ.
ಈ ಕಾಮಗಾರಿಯಿಂದ ಉಪ್ಪಿನಂಗಡಿ ಪಟ್ಟಣದ ಪ್ರಮುಖ ರಸ್ತೆ ಭಾಗವು ವಿಸ್ತರಣೆಯಾಗಲಿದ್ದು, ದಿನನಿತ್ಯ ವಾಹನ ಸವಾರರು ಹಾಗೂ ಸಾರ್ವಜನಿಕರು ಎದುರಿಸುತ್ತಿರುವ ಸಂಚಾರ ಸಮಸ್ಯೆಗೆ ಶಾಶ್ವತ ಪರಿಹಾರ ದೊರೆಯಲಿದೆ. ರಾಷ್ಟ್ರೀಯ ಹೆದ್ದಾರಿ ಸಂಪರ್ಕ ಹೊಂದಿರುವ ಈ ರಸ್ತೆಯ ಅಭಿವೃದ್ಧಿಯಿಂದ ವ್ಯಾಪಾರ ಚಟುವಟಿಕೆಗಳಿಗೂ ಉತ್ತೇಜನ ಸಿಗಲಿದೆ ಎಂದು ಅವರು ಹೇಳಿದರು.