Published
2 hours agoon
By
Akkare News
ಪುತ್ತೂರು, ಜೂ.15: ಉಪ್ಪಿನಂಗಡಿಯ ಮಹಾನ್ ಸ್ವಾತಂತ್ರ್ಯ ಹೋರಾಟಗಾರ ಉಬಾರ್ ಮಂಜ ಬೈದ್ಯರ ಪುತ್ಥಳಿ ನಿರ್ಮಾಣಕ್ಕೆ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿ ನೂತನವಾಗಿ ಅಸ್ತಿತ್ವಕ್ಕೆ ಬಂದಿರುವ ಬಿಲ್ಲವ ಬ್ರಿಗೇಡ್ ಪದಾಧಿಕಾರಿಗಳು ಪುತ್ತೂರು ಶಾಸಕ ಅಶೋಕ್ ಕುಮಾರ್ ರೈ ಅವರಿಗೆ ಮನವಿ ಸಲ್ಲಿಸಿದರು.
ಶಾಸಕರ ಕಚೇರಿಯಲ್ಲಿ ನಡೆದ ಈ ಸಂದರ್ಭದಲ್ಲಿ ಬಿಲ್ಲವ ಬ್ರಿಗೇಡ್ ಪ್ರತಿನಿಧಿಗಳು ಉಬಾರ್ ಮಂಜ ಬೈದ್ಯರ ಇತಿಹಾಸ, ಸ್ವಾತಂತ್ರ್ಯ ಹೋರಾಟದಲ್ಲಿ ಅವರ ಪಾತ್ರ ಹಾಗೂ ಇಂದಿನ ಪೀಳಿಗೆಗೆ ಅವರ ತ್ಯಾಗದ ಸಂದೇಶವನ್ನು ತಲುಪಿಸುವ ಅಗತ್ಯತೆಯನ್ನು ವಿವರಿಸಿದರು. ಉಪ್ಪಿನಂಗಡಿಯಲ್ಲಿ ಅವರ ಪುತ್ಥಳಿ ನಿರ್ಮಾಣ ಮಾಡುವ ಮೂಲಕ ಈ ಭಾಗದ ಇತಿಹಾಸವನ್ನು ಉಳಿಸಿ ಬೆಳೆಸಬೇಕೆಂದು ಒತ್ತಾಯಿಸಿದರು.