Published
2 hours agoon
By
Akkare News
ಮಾಣಿ : ಮಕ್ಕಳಲ್ಲಿನ ಸುಪ್ತ ಪ್ರತಿಭೆಯನ್ನು ಹೊರತರಲು ಹಾಗೂ ಅವರ ಕನಸುಗಳ ಸಾಕಾರಕ್ಕಾಗಿ ಸಂತಸದಾಯಕ ಕಲಿಕಾ ವಾತಾವರಣ ಅತ್ಯಗತ್ಯ” ಎಂದು ಬಂಟ್ವಾಳ ಬಿ.ಐ.ಆರ್.ಟಿ. ಸುರೇಖಾ ಏರವಾಳ ಅಭಿಪ್ರಾಯಪಟ್ಟರು.
ಅವರು ಬಂಟ್ವಾಳ ತಾಲೂಕಿನ ನೆಟ್ಲಾ ಮುಡ್ಡೂರು ಗ್ರಾಮದ ದ. ಕ. ಜಿ. ಪಂ. ಕಿರಿಯ ಪ್ರಾಥಮಿಕ ಶಾಲೆ ಏಮಾಜೆ ಇಲ್ಲಿ ಜೂನ್ 16, ಮಂಗಳವಾರದಂದು ಹಮ್ಮಿಕೊಳ್ಳಲಾಗಿದ್ದ *ಸೃಜನೋತ್ಸವ -2026’ ವಿನೂತನ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು. ಇದೇ ಸಂದರ್ಭದಲ್ಲಿ ಅವರು ಶಾಲೆಯ ಮಹತ್ವಾಕಾಂಕ್ಷೆಯ ದ್ವಿ-ಭಾಷಾ ಮಾಧ್ಯಮಕ್ಕೂ ಚಾಲನೆ ನೀಡಿದರು.